ಸಿಪಿಎಂ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮೇಲೆ ಹಲ್ಲೆ

08 Jun 2017 9:54 AM | Crime
722 Report

ನವದೆಹಲಿ: ಸಿಪಿಎಂ ನ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮೇಲೆ ನಾಲ್ವರ ಗುಂಪೊಂದು ಹಲ್ಲೆ ನಡೆಸಿರಪವ ಘಟನೆ ವರದಿಯಾಗಿದೆ.

ಈ ಕುರಿತು ಸೀತಾರಾಮ್ ಯೆಚೂರಿ ಟ್ವಿಟ್ ಮಾಡಿದ್ದು, ಸಂಘ ಪರಿವಾರ ಗೂಂಡಾಗಿರಿಯಿಂದ ನಮ್ಮನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಭಾರತದ ಮಣ್ಣಿಗಾಗಿ ನಡೆಯುವ ಈ ಹೋರಾಟದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

ಸೀತಾರಾಮ್ ಯೆಚೂರಿ ಮಾಧ್ಯಮಗೋಷ್ಠಿ ನಡೆಸುತ್ತಿದ್ದಾಗ ಅಲ್ಲಿಗೆ ಬಂದ ಗುಂಪೊಂದು ಸಿಪಿಎಂ ವಿರುದ್ಧ ಘೋಷಣೆ ಕೂಗಾತ್ತಾ ಸೀನ್ ಕ್ರಿಯೇಟ್ ಮಾಡಿದೆ. ಆದ್ರೆ ಘಟನೆಯಲ್ಲಿ ಯೆಚೂರಿ ಮೇಲೆ ಯಾವುದೇ ಗಾಯಗಳಾಗಿಲ್ಲ. ಹಲ್ಲೆಗೆ ಯತ್ನಿಸಿದವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

Edited By

venki swamy

Reported By

Sudha Ujja

Comments