ಆರುಷಿ ಕೊಂದ ಈ ಇಬ್ಬರಲ್ಲಿ ದೋಷಿಗಳು ಯಾರು?

12 Oct 2017 10:01 PM | Crime
355 Report

ಅಲಹಾಬಾದ್: ಆರುಷಿ- ಹೇಮರಾಜ್ ಅವಳಿ ಕೊಲೆ ಪ್ರಕರಣದಿಂದ ತಲ್ವಾರ ದಂಪತಿ ರಾಜೇಶ್ ಮತ್ತು ನೂಪುರ್ ಅವರನ್ನು ಅಲಹಾಬಾದ್ ಹೈಕೋರ್ಟ್ ಖುಲಾಸೆಗೊಳಿಸಿದೆ.

ಅಲಹಾಬಾದ್: ಆರುಷಿ- ಹೇಮರಾಜ್ ಅವಳಿ ಕೊಲೆ ಪ್ರಕರಣದಿಂದ ತಲ್ವಾರ ದಂಪತಿ ರಾಜೇಶ್ ಮತ್ತು ನೂಪುರ್ ಅವರನ್ನು ಅಲಹಾಬಾದ್ ಹೈಕೋರ್ಟ್ ಖುಲಾಸೆಗೊಳಿಸಿದೆ. 2008ರಲ್ಲಿ ನಡೆದಿದ್ದ ಎನ್ನಲಾದ ಈ ಕೊಲೆ ಪ್ರಕರಣದ ವಿಚಾರಣೆ ನಡೆಸಿದ್ದ ಗಾಜಿಯಾಬಾದ್ ಸಿಬಿಐ ವಿಶೇಷ
ನ್ಯಾಯಾಲಯ 2013ರಲ್ಲಿ ನವೆಂಬರ್ 26ರಂದು ತಲ್ವಾರ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ತಲ್ವಾರ್ ದಂಪತಿ ಅಲಹಾಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ರಾಜೇಶ್ ಮತ್ತು ನೂಪುರ್ ಅವರೇ ಈ ಜೋಡಿ ಕೊಲೆ ಮಾಡಿದ್ದಾರೆ ಎಂಬುದಕ್ಕೆ ಸೂಕ್ತವಾದ ಸಾಕ್ಷ್ಯಗಳಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಕೇವಲ ಶಂಕೆ ಆಧಾರದ ಮೇಲೆ ತಲ್ವಾರ್ ದಂಪತಿಯನ್ನು ದೋಷಿಗಳೆಂದು ತೀರ್ಮಾನಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

 

Edited By

venki swamy

Reported By

Sudha Ujja

Comments