ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಇಬ್ಬರು ಪರಾರಿ

25 Oct 2017 10:03 PM | Crime
236 Report

ವಿಚಾರಣಾಧೀನ ಕೈದಿಗಳಿಬ್ಬರು ಜೈಲಿನಿಂದ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಉತ್ತರಪ್ರದೇಶದ ಮುಜಾಫರ್ ನಗರ ಎಂಬಲ್ಲಿ ಈ ಘಟನೆ ನಡೆದಿರುವುದರ ಕುರಿತು ವರದಿಯಾಗಿದೆ.

ವಿಚಾರಣಾಧೀನ ಕೈದಿಗಳಿಬ್ಬರು ಜೈಲಿನಿಂದ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಉತ್ತರಪ್ರದೇಶದ ಮುಜಾಫರ್ ನಗರ ಎಂಬಲ್ಲಿ ಈ ಘಟನೆ ನಡೆದಿರುವುದರ ಕುರಿತು ವರದಿಯಾಗಿದೆ. ಪೊಲೀಸ್ ವಿಚಾರಣೆ ಬಳಿಕ ಆತನನ್ನು ಜೈಲಿಗೆ ಕರೆದ್ಯೊಲಾಗುತ್ತಿತ್ತು. ಈ ವೇಳೆ ಪರಾರಿಯಾಗಲು ಪ್ಲ್ಯಾನ್ ಮಾಡಿಕೊಂಡಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮುಜಾಫರ್ ನಗರ ವರಿಷ್ಠ ಪೊಲೀಸ್ ಅಧಿಕಾರಿ ಹೇಳುವ ಪ್ರಕಾರ, ಸುಶೀಲ್ ಹಾಗೂ ವಿಶಾಲ ಎಂಬ ಆರೋಪಿಗಳು ಪರಾರಿಯಾಗಿದ್ದು, ಕೈರನ್ ಶಹರ್ ನ ನ್ಯಾಯಾಲಯದಲ್ಲಿ ವಿಚಾರಣೆಗೆಂದು ಇಬ್ಬರು ಬಂದಿದ್ದರು. ಇಬ್ಬರು ಆರೋಪಿಗಳು ವಿಚಾರಣೆಗಾಗಿ ನ್ಯಾಯಾಲಯದಲ್ಲಿ ಹಾಜರಾದ ಬಳಿಕ ಜೈಲಿಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಪೊಲೀಸರ ಕಣ್ಣು ತಪ್ಪಿಸಿ ಇಬ್ಬರು ಪರಾರಿಯಾಗಿದ್ದಾರೆ.

 

Edited By

venki swamy

Reported By

Sudha Ujja

Comments