ಚಕ್ಕುಲಿ ತುಂಡನ್ನು ತಿಂದು ಸಾವಿಗೀಡಾದ ಕಂದಮ್ಮ

31 Oct 2017 3:27 PM | Crime
475 Report

ಗಂಟಲಲ್ಲಿ ಚಕ್ಕುಲಿ ಸಿಕ್ಕಿಕೊಂಡ ಪರಿಣಾಮ ಒಂದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ.ಗೇರುಕಟ್ಟೆಯ ನಿವಾಸಿ ವಿಠಲ್​ ಎಂಬುವವರ ಪುತ್ರ ಆರುಷ್​ ಸಾವಿಗೀಡಾಗಿರುವ ದುರ್ದೈವಿ.

 

ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮ ಈ ತುಂಡನ್ನು ನುಂಗಿದೆ. ಪರಿಣಾಮ ಚಕ್ಕುಲಿ ಪೀಸ್ ಗಂಟಲಲ್ಲಿ ಸಿಲುಕಿಕೊಂಡು ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು. ಮಗುವನ್ನು ಗಮನಿಸಿದ ಪೋಷಕರು ಕೂಡಲೇ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲೆಂದು ಕರೆದೊಯ್ದರಾದ್ರೂ ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಸದ್ಯ ಮಗುವಿನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Edited By

Suresh M

Reported By

Madhu shree

Comments