ಗೌರಿ ಲಂಕೇಶ್ ಹತ್ಯೆ ಹಿನ್ನಲೆ: ಮತ್ತೊಬ್ಬ ಆರೋಪಿ ಬಂಧನ

25 Jul 2018 10:11 AM | Crime
273 Report

ಚಿಂತಕಿ ಹಾಗೂ ಪತ್ರಕರ್ತೆಯಾದ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಮಂಗಳವಾರ ಸರ್ಕಾರಿ ನೌಕರನೊಬ್ಬನನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಮಂಗಳೂರು ಮೂಲದ ರಾಜೇಶ್ ಬಂಗೇರಾ (50 ) ಬಂಧಿತ ಆರೋಪಿ.

ಆರೋಪಿಯನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಎಸ್ಐಟಿ ತಂಡ 13 ದಿನಗಳ ಕಾಲ ಆರೋಪಿಯನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದೆ. ಅಷ್ಟೆ ಅಲ್ಲದೆ ಈ ಹತ್ಯೆಗೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಈಗಾಗಲೇ ಹತ್ತಕ್ಕೇರಿದೆ.

Edited By

Manjula M

Reported By

Manjula M

Comments