ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ಯೋಗ್ರಾಜ್ ಭಟ್ ದೂರು
'ದನಕಾಯೋನು' ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಕನಕಪುರ ಶ್ರೀನಿವಾಸ್ ನೀಡಿದ 26 ಲಕ್ಷ ರೂಪಾಯಿ ಚೆಕ್ ಬೌನ್ಸ್ ಆದ ಕಾರಣ ಖ್ಯಾತ ನಿರ್ದೇಶಕ ಯೋಗ್ರಾಜ್ ಭಟ್ ಅವರು ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಚೆಕ್ ಬೌನ್ಸ್ ಆದ ಕಾರಣ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ಖ್ಯಾತ ನಿರ್ದೇಶಕ ಯೋಗ್ರಾಜ್ ಭಟ್ ಅವರು ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ದೂರು ದಾಖಲಿಸಿರುವ ಬಗ್ಗೆ ವರದಿಯಾಗಿದೆ. ದುನಿಯಾ ವಿಜಯ್, ಪ್ರಿಯಾಮಣಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದ 'ದನ ಕಾಯೋನು' ಚಿತ್ರಕ್ಕೆ ಯೋಗ್ರಾಜ್ ಭಟ್ ನಿರ್ದೇಶನ ಮಾಡಿದ್ದರು.
Comments