`ರಾಜು ಕನ್ನಡ ಮೀಡಿಯಂ' ಚಿತ್ರ ವೀಕ್ಷಿಸುವಂತೆ ಸಿಎಂ ಗೆ ಮನವಿ

22 Jan 2018 1:37 PM | Entertainment
341 Report

ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ `ರಾಜು ಕನ್ನಡ ಮೀಡಿಯಂ' ತಂಡದವರು, ಸಿಎಂ ಸಿದ್ದರಾಮಯ್ಯನವರು ಕನ್ನಡ ಮಾಧ್ಯಮದಲ್ಲಿ ಓದಿ ಉನ್ನತ ಹುದ್ದೆಗೆ ಬಂದವರಾಗಿದ್ದರಿಂದ ಕನ್ನಡ ಮಾಧ್ಯಮಕ್ಕೆ ಸಂಬಂಧಿಸಿದ ಚಿತ್ರವನ್ನು ನೋಡಬೇಕೆಂದು ಮನವಿ ಮಾಡಿದೆ. ಜೊತೆಗೆ ಈ ಚಿತ್ರಕ್ಕೆ ಜಿ.ಎಸ್.ಟಿ ರಿಯಾಯಿತಿಯನ್ನು ನೀಡಬೇಕೆಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದೆ.

ಚಿತ್ರತಂಡದ ಮನವಿಗೆ ಸಿಎಂ ಸಿನಿಮಾ ನೋಡುವುದಾಗಿ ಆಶ್ವಾಸನೆ ನೀಡಿ ಕಳುಹಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಓದಿದ ವ್ಯಕ್ತಿಯೊಬ್ಬ ಮುಂದೆ ಹೇಗೆ ಸಾಧನೆ ಮಾಡುತ್ತಾನೆ ಎಂಬ ಅಂಶವಿರುವ `ರಾಜು ಕನ್ನಡ ಮೀಡಿಯಂ' ಚಿತ್ರದಲ್ಲಿ ಗುರುನಂದನ್ ನಾಯಕರಾಗಿ ನಟಿಸಿದ್ದು, ಸುದೀಪ್ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರದಲ್ಲಿ ಅವಂತಿಕಾ ಶೆಟ್ಟಿ ಹಾಗೂ ಆಶಿಕಾ ರಂಗನಾಥ್ ನಾಯಕಿಯರು. `ಫಸ್ಟ್ ರ್ಯಾಂಕ್ ರಾಜು' ನಿರ್ದೇಶಿಸಿದ್ದ ನರೇಶ್ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶಿಸಿದ್ದಾರೆ.

Edited By

Shruthi G

Reported By

Madhu shree

Comments