ಕೊಟ್ಟ ಮಾತು ಉಳಿಸಿಕೊಂಡ ಡಿ-ಬಾಸ್

13 Apr 2018 5:43 PM | Entertainment
521 Report

ಕೆಲ ತಿಂಗಳುಗಳ ಹಿಂದೆ ಹಿರಿಯ ನಟ ಅಶ್ವಥ್ ಪುತ್ರ ಶಂಕರ್ ಅಶ್ವಥ್ ಕ್ಯಾಬ್ ಓಡಿಸುತ್ತಿದ್ದ ಸುದ್ದಿ ಮಾಧ್ಯಮಗಳಲ್ಲಿ ಪ್ರಚಾರವಾಗಿತ್ತು. ಒಬ್ಬ ದೊಡ್ಡ ನಟನ ಮಗನ ಇಂದಿನ ಪರಿಸ್ಥಿತಿ ನೋಡಿ ಎಲ್ಲರೂ ಕೂಡ ಬೇಸರಗೊಂಡಿದ್ದು ನಿಜ.

ಆದರೆ ಆ ಸಮಯದಲ್ಲಿ ಶಂಕರ್ ಅಶ್ವಥ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹಾಯ ಮಾಡುವುದಾಗಿ ತಿಳಿಸಿದ್ದರು. ಆದರೆ ಇದೀಗ ಶಂಕರ್ ಅಶ್ವಥ್ ಮುಖದಲ್ಲಿ ನಗು ಮೂಡಿದೆ. ಅದಕ್ಕೆ ಕಾರಣ ಡಿ-ಬಾಸ್. ದರ್ಶನ್ ಕೊಟ್ಟ ಮಾತಿನಂತೆ ಸಿನಿಮಾದಲ್ಲಿ ಅವಕಾಶವನ್ನು ನೀಡಿದ್ದಾರೆ. ದರ್ಶನ್ ತಾವು ನಟಿಸುತ್ತಿರುವ `ಯಜಮಾನ’ ಸಿನಿಮಾದಲ್ಲಿ ಶಂಕರ್ ಅಶ್ವಥ್ ಅವರಿಗೆ ಅವಕಾಶ ನೀಡಿದಲ್ಲದೆ ಈ ಸಿನಿಮಾದ ಒಂದು ಪಾತ್ರದಲ್ಲಿ ಶಂಕರ್ ಅಶ್ವಥ್ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾದ ಶೂಟಿಂಗ್ ನಲ್ಲಿ ಇದೀಗ ಶಂಕರ್ ಅಶ್ವಥ್ ಭಾಗಿಯಾಗಿದ್ದು, ಈ ವೇಳೆ ದರ್ಶನ್ ಜತೆಗೆ ಫೋಟೋವನ್ನು ಕೂಡ ತೆಗೆದುಕೊಂಡಿದ್ದಾರೆ.

Edited By

Manjula M

Reported By

Manjula M

Comments