ಡಾ.ರಾಜ್ ಕುಮಾರ್ ಅಪಹರಣ ಪ್ರಕರಣದ 9 ಆರೋಪಿಗಳ ಕೇಸ್ ಖುಲಾಸ್

25 Sep 2018 1:26 PM | Entertainment
328 Report

ದಂತಚೋರ ವೀರಪ್ಪನ್ ಮತ್ತು ಆತನ ಸಂಗಡಿಗರು 18 ವರ್ಷಗಳ ಹಿಂದೆ ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರನ್ನು, ಅಪಹರಣ ಮಾಡಿದ್ದ ಪ್ರಕರಣ ಸಂಬಂಧವಾಗಿ ದಾಖಲಾಗಿದ್ದ ಕೇಸಿನ ತೀರ್ಪು ಇಂದು ಪ್ರಕಟವಾಗಲಿದೆ. ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂನ ನ್ಯಾಯಾಲಯ ಈ ತೀರ್ಪುನ್ನು ಪ್ರಕಟಿಸಿದೆ.

ಹದಿನೆಂಟು ವರ್ಷಗಳ ಹಿಂದೆ ನಡೆದ ದಂತಚೋರ ವೀರಪ್ಪನ್ ಸಹಚರರು ವರನಟ ಡಾ.ರಾಜ್ ಕುಮಾರ್ ಅವರನ್ನು ಅಪಹರಣ ಮಾಡಿರುವ ಪ್ರಕರಣದ ಎಲ್ಲ 9 ಮಂದಿ ಆರೋಪಿಗಳನ್ನು ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂನ ಜಿಲ್ಲಾ ನ್ಯಾಯಾಲಯ ಮಂಗಳವಾರ ದೋಷಮುಕ್ತಗೊಳಿಸಿ ತೀರ್ಪನ್ನು ಹೊರಡಿಸಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಸರಿಯಾದ ಸಾಕ್ಷ್ಯ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ. ರಾಜ್ ಕುಮಾರ್ ಪತ್ನಿ ಪಾರ್ವತಮ್ಮ ಈ ಸಂಬಂಧ ಸಾಕ್ಷ್ಯ ನೀಡಿಲ್ಲ ಎಂದು ಹೇಳಿದ ನ್ಯಾಯಾಲಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿದೆ.

Edited By

Manjula M

Reported By

Manjula M

Comments