ಶಾಕಿಂಗ್ ನ್ಯೂಸ್ : ಅಗ್ನಿಸಾಕ್ಷಿ ನಟನ ವಿರುದ್ಧ ಪತ್ನಿ ಕೇಸ್…!!!
ಕಿರುತೆರೆಯ ಹೈ ಟಿಆರ್ ಪಿ ಸೀರಿಯಲ್ ಅಗ್ನಿಸಾಕ್ಷಿಯಲ್ಲಿ ನಟಿಸುತ್ತಿರುವ ಪಾತ್ರದಾರಿಯೊಬ್ಬರ ಪತ್ನಿ ನಟನ ವಿರುದ್ಧ ದೂರು ನೀಡಿದ್ದಾರೆ. ವರದಕ್ಷಿಣೆ ಕಿರುಕುಳದ ಆರೋಪದ ಮೇಲೆ ಸೀರಿಯಲ್ ನಟನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಅಖಿಲ್ ಪಾತ್ರ ನಿರ್ವಹಿಸುತ್ತಿದ್ದ ರಾಜೇಶ್ ಧ್ರುವ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.
ವರದಕ್ಷಿಣೆ ತರುವಂತೆ ಆಗಾಗ್ಗ ನನ್ನ ಪತಿ ಧ್ರುವ ಕಿರುಕುಳ ನೀಡುತ್ತಿದ್ದಾರೆ. ನನ್ನನ್ನು ಮನೆಯಿಂದ ಹೊರಹಾಕಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಧ್ರುವ ಪತ್ನಿ ಆರೋಪ ಮಾಡಿದ್ದಾರೆ. ಈ ಹಿನ್ನೆಲೆ ಧ್ರುವ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಅಲ್ಲದೇ 2017ರಲ್ಲಿಯೇ ನನ್ನೊಂದಿಗೆ ಮದುವೆಯಾಗಿದ್ದಾರೆ ಧ್ರುವ, ನಂತರ ನನಗೆ ಮದುವೆಯಾಗಿಲ್ಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎನ್ನಲಾಗಿದೆ.
ಲಿವಿಂಗ್ ಟುಗೆದರ್ ರಿಲೇಷನ್ಶಿಪ್ನಲ್ಲಿದ್ದ ಈ ಜೋಡಿ ನಂತರ ಮದುವೆಯಾಗಿ, ನಟ ಮುಖ್ಯಮಂತ್ರಿ ಚಂದ್ರು ಅವರ ಮನೆಯಲ್ಲಿ ಬಾಡಿಗೆಗೆ ಇದ್ದರು ಎಂದು ತಿಳಿದುಬಂದಿದೆ. ಧೃವಾಗೆ ಬೇರೆ ಹುಡುಗಿ ಜೊತೆ ಅಫೇರ್ ಇದೆ. ಈ ಬಗ್ಗೆ ಕೇಳಿದ್ರೆ ದೈಹಿಕವಾಗಿ ಹಿಂಸೆ ನಿಡುತ್ತಾರೆ ಎಂದು ಧೃವಾ ಪತ್ನಿ ಆರೋಪಿಸಿದ್ದಾರೆ. ಸದ್ಯ ಧೃವಾ ತಕಧಿಮಿತ ರಿಯಾಲಿಟಿ ಶೋನಲ್ಲಿ ಬ್ಯುಸಿಯಾಗಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮನೆಯಿಂದ ಪತ್ನಿಯನ್ನು ಹೊರಹಾಕಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ಹಿನ್ನೆಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಧ್ರುವ ಪತ್ನಿ ಪ್ರಕರಣ ದಾಖಲಿಸಿದ್ದಾರೆ.
Comments