ಶಶಿಕಲಾರನ್ನು ಭೇಟಿಯಾದ ದಿನಕರನ್

18 Aug 2017 3:35 PM | General
361 Report

ಜಯಲಲಿತಾ ಸಾವನ್ನು ತಮಿಳುನಾಡು ಸರ್ಕಾರ ತನಿಖೆಗೆ ಆದೇಶಿಸುತ್ತಿದ್ದಂತೆ ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್ ಬೆಂಗಳೂರಿಗೆ ದೌಡಾಯಿಸಿದ್ದಾರೆ.

 

ಬೆಳಗ್ಗೆಯೇ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ ಟಿಟಿವಿ ದಿನಕರನ್, ಶಶಿಕಲಾ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಿಎಂ ಪಳನಿಸ್ವಾಮಿ ಮತ್ತು ದಿನಕರನ್ ನಡುವಿನ ಸಂಬಂಧ ಹಳಸಿದ್ದು ಪರಸ್ಪರ ವಾಗ್ದಾಳಿ ನಡೆಸುತ್ತಿದ್ಧಾರೆ. ಇದರ ಬೆನ್ನಲ್ಲೇ ಜಯಲಲಿತಾ ಸಾವಿನ ತನಿಖೆಗೆ ಆದೇಶಿಸಿದ್ದು, ದಿನಕರನ್ ವಶದಲ್ಲಿದ್ದ ಜಯಲಲಿತಾ ಅವರ ಪೋಯಸ್ ಗಾರ್ಡನ್ ನಿವಾಸವನ್ನ ಸ್ಮಾರಕ ಮಾಡಲು ಮುಂದಾಗಿದ್ದಾರೆ. ಈ ಎಲ್ಲ ಬೆಳವಣಿಗೆಗೆ ಕುರಿತಂತೆ ದಿನಕರನ್ ಚರ್ಚೆ ನಡೆಸಿರುವ ಸಾಧ್ಯತೆ ಇದೆ.
 
ದಿನಕರನ್ ಮತ್ತು ಶಶಿಕಲಾ ವಿರುದ್ಧದ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿಯೇ ಸಿಎಂ ಪಳನಿಸ್ವಾಮಿ, ಜಯಲಲಿತಾ ಸಾವಿನ ಪ್ರಕರಣವನ್ನ ತನಿಖೆಗೆ ಆದೇಶಿಸಿದ್ದಾರೆ ಎನ್ನಲಾಗಿದೆ.

Edited By

Suhas Test

Reported By

Suhas Test

Comments