ಸಾವಿನ ನಂತರವೂ ಮಾನವೀಯತೆ: ಗೌರಿ ಲಂಕೇಶ್ ನೇತ್ರದಾನ

06 Sep 2017 11:42 AM | General
370 Report

ಬೆಂಗಳೂರು : ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ (55) ಅವರ ಇಚ್ಛೆಯಂತೇ ಅವರ ಕಣ್ಣುಗಳನ್ನು ದಾನ ಮಾಡುವುದಾಗಿ ಅವರ ತಮ್ಮ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.

ತಾನು ಸತ್ತ ನಂತರ ತಮ್ಮ ಕಣ್ಣುಗಳು ಇನ್ನೊಬ್ಬರ ಕತ್ತಲೆಯ ಬದುಕಿಗೆ ಬೆಳಕಾಗಬೇಕು ಎಂಬುದು ಅಕ್ಕ ಗೌರಿ ಅವರ ಆಸೆಯಾಗಿತ್ತು. ಅದಕ್ಕೆಂದೇ ಅವರ ಕಣ್ಣುಗಳನ್ನು ಚಾಮರಾಜಪೇಟೆಯಲ್ಲಿರುವ ಮಿಂಟೋ ಕಣ್ಣಿನ ಆಸ್ಪತ್ರೆಗೆ ದಾನ ಮಾಡುತ್ತಿರುವುದಾಗಿ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

Edited By

Shruthi G

Reported By

Shruthi G

Comments