ಮೇಯರ್ ಚುನಾವಣೆಗೆ ನಿಗದಿತ ಸಮಯಕ್ಕಿಂತ ತಡವಾಗಿ ಬಂದ್ರೆ ಪ್ರವೇಶವಿಲ್ಲ

22 Sep 2017 5:13 PM | General
453 Report

ಬೆಂಗಳೂರು: ಈ ಬಾರಿಯ ಬಿಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ನಿಗದಿತ ಸಮಯಕ್ಕಿಂತ ಯಾವುದೇ ಮತದಾರರು ತಡವಾಗಿ ಬಂದರೆ ಅಂತಹವರಿಗೆ ಚುನಾವಣೆ ನಡೆಯುವ ಕೆಂಪೇಗೌಡ ಪೌರಸಭಾಂಗಣದೊಳಗೆ ಪ್ರವೇಶ ನೀಡಬಾರದೆಂದು ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಬಾರಿ ಮೇಯರ್ ಹಾಗೂ ಉಪಮೇಯರ್ ಚುನಾವಣೆ ವೇಳೆ ಕೆಲ ಮತದಾರರು ತಡವಾಗಿ ಬಂದ ಹಿನ್ನೆಲೆಯಲ್ಲಿ ಅವರಿಗೆ ಮತದಾನ ಮಾಡಲು ಅವಕಾಶ ನೀಡಲಾಗಿರಲಿಲ್ಲ. ಹಾಗಾಗಿ ಗದ್ದಲ ಉಂಟಾಗಿತ್ತು. ಮತದಾನಕ್ಕೆ ಅವಕಾಶ ನೀಡುವುದಿಲ್ಲ ಎನ್ನುವುದಾದರೆ ಸ‘ಭಾಂಗಣಕ್ಕೆ ಪ್ರವೇಶ ಏಕೆ ನೀಡಿದಿರಿ ಎಂಬ ಪ್ರಶ್ನೆ ಉದ್ಭವಿಸಿತ್ತು.

ಸೆ.28ರಂದು ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂದು ಬೆಳಗ್ಗೆ 11.30ರ ನಂತರ ಬರುವ ಯಾವುದೇ ಮತದಾರರಿಗೆ ಸಭಾಂಗಣಕ್ಕೆ ಬರಲು ಅವಕಾಶ ನೀಡಬಾರದು ಎಂದು ಸೂಚಿಸಲಾಗಿದ್ದು, ಜತೆಗೆ ಮತದಾರರನ್ನು ಗುರುತಿಸಲು ಹಿರಿಯ ಅಧಿಕಾರಿಯೊಬ್ಬರನ್ನು ನೇಮಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Edited By

Shruthi G

Reported By

Shruthi G

Comments