ವರುಣನ ಆರ್ಭಟಕ್ಕೆ ತತ್ತರಿಸಿದ ಮೈಸೂರು

27 Sep 2017 11:13 AM | General
325 Report

ರಾತ್ರಿಯಿಡಿ ಮೈಸೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬೋಗಾದಿಕೆರೆ ತುಂಬಿ ಹರಿಯುತ್ತಿದೆ. ದಸರಾ ಸಂಭ್ರಮಕ್ಕೆ ವರುಣ ಅವಕೃಪೆ ತೋರಿದ್ದಾನೆ . ರಸ್ತೆ, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಉದಯಗಿರಿ, ಬನ್ನಿ ಮಂಟಪ ಬಡಾವಣೆಗಳಿಗೂ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ.

ಇನ್ನು ಕನಕಗಿರಿ ಬಡಾವಣೆಯಲ್ಲಿ ಮನೆಯೊಳಗೆ ನೀರು ನುಗ್ಗಿದ್ದು, 2 ತಿಂಗಳ ಹಸುಗೂಸು ಮತ್ತು ಬಾಣಂತಿಯನ್ನು ಸ್ಥಳೀಯರು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದಾರೆ. ಅನೇಕ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮೈಸೂರು ಮಾತ್ರವಲ್ಲದೇ, ಜಿಲ್ಲೆಯ ಅನೇಕ ತಾಲ್ಲೂಕುಗಳಲ್ಲಿ ಮಳೆಯಾಗಿ, ಹಳ್ಳಕೊಳ್ಳಗಳು ತುಂಬಿ ಹರಿದಿವೆ.

Edited By

Hema Latha

Reported By

Madhu shree

Comments