ಯಶೋಮಾರ್ಗಕ್ಕೆ ಜಯ : ತಲ್ಲೂರು ಕೆರೆಯಲ್ಲೀಗ ನೀರೋ ನೀರು

14 Oct 2017 10:12 AM | General
344 Report

ಸುಮಾರು 90 ಎಕ್ರೆ ವಿಸ್ತೀರ್ಣವನ್ನು ಈ ಕೆರೆ ಹೊಂದಿದೆ. 'ಯಶೋಮಾರ್ಗ'ದ ಅಡಿಯಲ್ಲಿ 4 ಕೋಟಿ ವೆಚ್ಚದಲ್ಲಿ ಎರಡು ಮೂರು ತಿಂಗಳ ಕಾಲ ಈ ಕೆರೆಯ ಹೂಳೆತ್ತಲಾಗಿತ್ತು. ಇದರಿಂದ ಕೆರೆಯಲ್ಲಿ ಹೆಚ್ಚು ನೀರು ಸಂಗ್ರಹವಾಗಲು ಅನುಕೂಲವಾಗಿದೆ. ತಲ್ಲೂರು ಕೆರೆ ತುಂಬಿರೋದ್ದರಿಂದ ಈ ಭಾಗದ ಹತ್ತಕ್ಕೂ ಹೆಚ್ಚು ಗ್ರಾಮದ ರೈತರಿಗೆ ಅನುಕೂಲವಾಗಿದೆ. ಕೆರೆ ಕಾಯಕಲ್ಪ ಕಲ್ಪಿಸಿದ ನಟ ಯಶ್ ಕಾರ್ಯವನ್ನು ರೈತರು ಸ್ಮರಿಸ್ತಿದ್ದಾರೆ.

ಸ್ಯಾಂಡಲ್ ವುಡ್ ಸ್ಟಾರ್ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಯಶೋಮಾರ್ಗದ ಮೂಲಕ ಕಾಯಕಲ್ಪ ನೀಡಿದ್ದ ಕೊಪ್ಪಳದ ಕೆರೆಯೀಗ ಭರ್ತಿಯಾಗಿದೆ. ಯಶ್ ಮತ್ತು ರಾಧಿಕಾ ಪಂಡಿತ್ ಉತ್ತರ ಕರ್ನಾಟಕದ ಕೆರೆಗಳ ಹೂಳೆತ್ತಿಸಿದ್ದರು. ಇವುಗಳಲ್ಲಿ ಕೊಪ್ಪಳದ ತಲ್ಲೂರು ಕೆರೆ ಭರ್ತಿಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ತಲ್ಲೂರ ಕೆರೆ ಸಂಪೂರ್ಣ ಭರ್ತಿಯಾಗಿದೆ.  ಸುಮಾರು 90 ಎಕ್ರೆ ವಿಸ್ತೀರ್ಣವನ್ನು ಈ ಕೆರೆ ಹೊಂದಿದೆ. 'ಯಶೋಮಾರ್ಗ'ದ ಅಡಿಯಲ್ಲಿ 4 ಕೋಟಿ ವೆಚ್ಚದಲ್ಲಿ ಎರಡು ಮೂರು ತಿಂಗಳ ಕಾಲ ಈ ಕೆರೆಯ ಹೂಳೆತ್ತಲಾಗಿತ್ತು. ಇದರಿಂದ ಕೆರೆಯಲ್ಲಿ ಹೆಚ್ಚು ನೀರು ಸಂಗ್ರಹವಾಗಲು ಅನುಕೂಲವಾಗಿದೆ.

 

Edited By

Shruthi G

Reported By

Madhu shree

Comments