ವರದಕ್ಷಿಣೆ ಕಿರುಕುಳದ ಹಿನ್ನೆಲೆ ಕಾರ್ಪೋರೇಟರ್ ಪುತ್ರಿ ಆತ್ಮಹತ್ಯೆಗೆ ಶರಣು

02 Dec 2017 1:36 PM | General
318 Report

ಮುಖ್ಯಮಂತ್ರಿ ಸಿದ್ದರಾಮಯ್ಯರ ಅವರ ಪರಮಾಪ್ತ ಕಾರ್ಪೋರೇಟರ್ ನಾಗಭೂಷಣ್ ಅವರ ಪುತ್ರಿ 6ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ವನಿತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೆಚ್‌ಎಸ್‌ಆರ್ ಲೇಔಟ್ ಲ್ಲಿ ನಡೆದಿದೆ.

ಆರು ತಿಂಗಳ ಹಿಂದೆಯಷ್ಟೇ ತಮಿಳುನಾಡು ಮೂಲದ ಟೆಕ್ಕಿ ವಸಂತ್ ಎಂಬವರ ಜೊತೆ ಮದ್ವೆಯಾಗಿದ್ದು, ಬೆಂಗಳೂರಿನ ಹೆಚ್‍ಎಸ್‍ಆರ್ ಲೇಔಟ್ ಗಂಡನ ಮನೆಯಲ್ಲಿ ವಾಸವಾಗಿದ್ದರು. ಆದರೆ, ವನಿತಾ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಮಾಡಿಕೊಂಡಿದ್ದಾರೆ. ಮೃತ ವನಿತಾ ಸಾಯುವ ಮುಂಚೆ 4 ಪುಟದ ಡೆತ್‍ನೋಟ್ ಬರೆದಿದ್ದಾರೆ. ನನ್ನ ಅತ್ತೆ ಗಾಯತ್ರಿ ಪ್ರತಿನಿತ್ಯ ಮನೆಯಲ್ಲಿ ಕಿರುಕುಳ ನೀಡುತಿದ್ದಾರೆ. ಅಪ್ಪನ ಮನೆಯಿಂದ ವರದಕ್ಷಿಣೆ ತರುವಂತೆ ಪೀಡಿಸುತ್ತಾರೆ. ಅಷ್ಟೇ ಅಲ್ಲದೇ ಸರಿಯಾಗಿ ಊಟ ತಿಂಡಿಯನ್ನು ಸಹ ನೀಡದೆ ಹಿಂಸೆ ನೀಡುತ್ತಿದ್ದಾರೆ. ಇದರಿಂದ ನಾನು ಬೇಸತ್ತು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.


Edited By

venki swamy

Reported By

Madhu shree

Comments