ಡಿ.28ರಂದು ಮಂಗಳೂರಿಗೆ ತೆರಳಲಿರುವ ಎಚ್.ಡಿ.ಕುಮಾರಸ್ವಾಮಿ

28 Dec 2017 11:24 AM | General
368 Report

ಡಿ. 28ರಂದು ಅಪರಾಹ್ನ 2 ಗಂಟೆಗೆ ನಗರದ ಶಾಂತಿನಿಲಯದಲ್ಲಿ ಜನತಾದಳದ ಕಾರ್ಯಕರ್ತರ ಮತ್ತು ಪ್ರಮುಖರ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.ಅವರೊಂದಿಗೆ ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಮತ್ತಿತರ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ.

ಜನತಾದಳದ ವತಿಯಿಂದ ಅಲ್ಪಸಂಖ್ಯಾತರ ವಿಶೇಷ ವಾಹನವೊಂದು ‘ಮೈನಾರಿಟಿ ಎಕ್ಸ್‌ಪ್ರೆಸ್’ ಎನ್ನುವ ಹೆಸರಿನಲ್ಲಿ ಜಿಲ್ಲೆಯ ಉದ್ದಗಲಕ್ಕೂ ಸಂಚರಿಸಲಿದ್ದು, ಅದರ ಉದ್ಘಾಟನೆಯನ್ನು ಸಂಜೆ 5 ಗಂಟೆಗೆ ನಗರದ ಸರ್ಕ್ಯೂಟ್ ಹೌಸ್ ಬಳಿ ನೆರವೇರಿಸಲಾಗುವುದು. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಕ್ಷದ ಜಿಲ್ಲಾಧ್ಯಕ್ಷ ವಿ. ಮುಹಮ್ಮದ್ ಕುಂಞಿ ಪ್ರಕಟನೆಯಲ್ಲಿ ತಿಳಿಸಿದೆ.

Edited By

Shruthi G

Reported By

Shruthi G

Comments