ಮಹದಾಯಿ ನೀರಿಗಾಗಿ ರಾಮನಗರದಲ್ಲಿ ವಿನೂತನ ಪ್ರತಿಭಟನೆ

25 Jan 2018 10:04 AM | General
397 Report

ರಾಮನಗರ: ಮಹದಾಯಿ ನೀರಿಗಾಗಿ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಮುಂಜಾನೆಯಿಂದಲೇ ಪ್ರತಿಭಟನೆಗಳು ಶುರುವಾಗಿವೆ.

ರಾಮನಗರದಲ್ಲಿ ಮೊದಲಿಗೆ ಕರುನಾಡ ಸೇನೆ ಕಾರ್ಯಕರ್ತರು ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಗೋವಾ ಸಿಎಂ ಮನೋಹರ್ ಪರಿಕ್ಕರ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕನ್ನಡ ಜನಮನ ವೇದಿಕೆ ಕಾರ್ಯಕರ್ತರು ಖಾಲಿ ಕೊಡಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.

Edited By

venki swamy

Reported By

venki swamy

Comments