ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಗಂಗಾಶ್ರೀಗಳು ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು

26 Jan 2018 10:46 AM | General
387 Report

ತುಮಕೂರು: ಸಿದ್ದಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಶೀತ ಮತ್ತು ಕಫ ಹೆಚ್ಚಾಗಿ ಬಳಲುತ್ತಿದ್ದರಿಂದ ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾತ್ರಿ ಶೀತ,ಕಫ ದಿಂದ ಬಳಲುತ್ತಿದ್ದರು. ಈ ಸ್ಥಿತಿಯಲ್ಲೇ ಅವರು ಇಷ್ಟಲಿಂಗ ಪೂಜೆ ನೆರವೇರಿಸಿದರು. ಬಳಿಕ ಅವರನ್ನು ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಯಿತು ಎಂದು ಮಠದ ಮೂಲಗಳು ತಿಳಿಸಿವೆ.

 

Edited By

Shruthi G

Reported By

Shruthi G

Comments