ನಾಗರಹೊಳೆ ರಾತ್ರಿ ಸಂಚಾರ ನಿರ್ಬಂಧಕ್ಕೆ ಅಸ್ತು ಅಂದ ಸುಪ್ರೀಂ

21 Apr 2018 12:24 PM | General
559 Report

ನಾಗರಹೊಳೆ ಹುಲಿ ಧಾಮದ ಮೂಲಕ ಹಾದು ಹೋಗುವ ಹೆದ್ದಾರಿಯನ್ನು ಸಂಜೆ 6 ರಿಂದ ಮುಂಜಾನೆ 6 ರವರೆಗೆ ಬಂದ್ ಮಾಡಿದ ರಾಜ್ಯ ಸರ್ಕಾರದ ನಡೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ವನ್ಯಜೀವಿ ಸಂರಕ್ಷಣೆ ನಿಟ್ಟಿನಲ್ಲಿ ಇದೊಂದು ಮಹತ್ವದ ತೀರ್ಪು ಎಂದು ಹೇಳಲಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ದಕ್ಷಿಣ ಭಾಗದಲ್ಲಿ ಸಾಗುವ ಮೈಸೂರು-ಮಾನಂದವಾಡಿ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ ಹೇರಿ 2008ರ ಜುಲೈಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದರು. ಅಷ್ಟೇ ಅಲ್ಲದೆ, ಈ ಹೆದ್ದಾರಿಗೆ ಪರ್ಯಾಯ ಮಾರ್ಗವನ್ನೂ ಸೂಚಿಸಲಾಗಿತ್ತು. ಆದರೆ ಸರ್ಕಾರ ಈ ನಡೆಯನ್ನು ಮಾನಂದವಾಡಿ-ಮೈಸೂರು ರಸ್ತೆ ಜಂಟಿ ಕ್ರಿಯಾ ಸಮಿತಿ ನ್ಯಾಯಾಲಯದಲ್ಲಿ ಪ್ರಶ್ನೆಯನ್ನು ಮಾಡಲಾಗಿತ್ತು.  ಬಂಡೀಪುರ ಅಭಯಾರಣ್ಯದಲ್ಲೂ ರಾತ್ರಿ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇನ್ನೂ ವಿಚಾರಣೆಯ ಹಂತದಲ್ಲಿದೆ.

 

Edited By

Manjula M

Reported By

Manjula M

Comments