ಭಾರೀ ಮಳೆ ಹಿನ್ನಲೆ : ದ.ಕ.ಜಿಲ್ಲೆ, ಉಡುಪಿ ಶಾಲೆಗಳಿಗೆ ರಜೆ ಘೋಷಣೆ

08 Jun 2018 10:06 AM | General
480 Report

ರಾಜ್ಯಾದ್ಯಾಂತ  ಎಲ್ಲಾ  ಕಡೆಗಳಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಿದೆ. ದಕ್ಷಿಣ ಕನ್ನಡ  ಜಿಲ್ಲೆ ಮತ್ತು ಉಡುಪಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮುಂಜಾಗ್ರತೆಗಾಗಿ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ.

ಉಡುಪಿಯಲ್ಲಿ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿನ್ಸ್ ಶಾಲೆಗಳಿಗೆ ಶುಕ್ರವಾರ ರಜೆಯನ್ನು ಘೋಷಣೆ ಮಾಡಿದ್ದಾರೆ. ಮಂಗಳೂರಿನಲ್ಲಿ ಮಳೆ ಬಿರುಸು ಪಡೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡ ‌ ಜಿಲ್ಲೆ ಶಾಲೆಗಳಿಗೆ ಇಂದು ಮತ್ತೆ ನಾಳೆ ರಜೆಯನ್ನು ಘೋಷಣೆ ಮಾಡಿದ್ದಾರೆ.

Edited By

Manjula M

Reported By

Manjula M

Comments