ಅಟಲ್ ಬಿಹಾರಿ ವಾಜಪೇಯಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಹೆಚ್'ಡಿ.ಕೆ
ನಮ್ಮ ದೇಶ ಕಂಡಂತಹ ಅಪರೂಪದ ರಾಜಕಾರಣಿಯಾದ ಅಟಲ್ ಬಿಹಾರಿ ವಾಜಪೇಯಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ಸಂಜೆ ನಿಧನರಾಗಿದ್ದಾರೆ.
ವಾಜಪೇಯಿ ಅವರ ನಿಧನಕ್ಕೆ ರಾಜ್ಯದ ಗಣ್ಯಾತೀಗಣ್ಯರು ಸಂತಾಪವನ್ನು ಸೂಚಿಸಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ದೆಹಲಿಗೆ ಹೋಗಲಿದ್ದಾರೆ. ಹೆಚ್.ಎ.ಎಲ್ ಏರ್ ಪೋರ್ಟ್ ನಿಂದ ಸಿಎಂ ಕುಮಾರಸ್ವಾಮಿ ಮತ್ತು ದೇವೇಗೌಡರು ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿ ವಾಜಪೇಯಿಯವರ ಅಂತಿಮ ದರ್ಶನವನ್ನು ಪಡೆಯಲಿದ್ದಾರೆ.
Comments