ಪೊಲೀಸರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಕುಮಾರಸ್ವಾಮಿ
ಸಾರ್ವಜನಿಕರಿಗಾಗಿ ಹಗಲಿರುಳು ಎನ್ನದೆ ಕಾರ್ಯ ನಿರ್ವಹಿಸುವ ಪೊಲೀಸರಿಗೆ ಸಿಎಂ ಕುಮಾರಸ್ವಾಮಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ಇದೀಗ ಪೊಲೀಸರ ವೇತನ ಹೆಚ್ಚಳಕ್ಕೆ ತಮ್ಮ ಸರ್ಕಾರ ಸಿದ್ದವಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಕೋರಮಂಗಲದ ಕೆ.ಎಸ್.ಆರ್.ಪಿ. ಮೈದಾನದಲ್ಲಿ ಭಾನುವಾರ ಆಯೋಜಿಸಿದಂತಹ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ವೇತನ ಪರಿಷ್ಕರಣೆ ಸಂಬಂಧ ಎಡಿಜಿಪಿ ರಾಘವೇಂದ್ರ ಔರದ್ಕರ್ ಅವರ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ತಿಳಿಸಿದ್ದಾರೆ.
Comments