ಕೊನೆಗೂ ಸಾಲ ಮನ್ನಾ ಋಣಮುಕ್ತ ಪತ್ರ ವಿತರಣೆಗೆ ಡೇಟ್ ಫಿಕ್ಸ್..! ಯಾವಾಗ್ ಗೊತ್ತಾ..?

07 Dec 2018 4:44 PM | General
1087 Report

ರೈತರ ಬೆಳೆ ಸಾಲ ಮನ್ನಾ ವಿಚಾರಕ್ಕೆ ಚಾಲನೆ ಸಿಕ್ಕಿದ್ದು ರೈತರ ಬೆಳೆ ಸಾಲ ಮನ್ನಾ ಯೋಜನೆಯ ಋಣಮುಕ್ತ ಪತ್ರ ವಿತರಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಈ ವಿಷಯದಿಂದಾಗಿ ರೈತರು ತುಂಬಾ ಖುಷಿಯಲ್ಲಿದ್ದಾರೆ

ಡಿ.8 ರಂದು ಮಧ್ಯಾಹ್ನ 2 ಗಂಟೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ರೈತರ ಬೆಳೆ ಸಾಲ ಮನ್ನಾ ಯೋಜನೆ ಋಣಮುಕ್ತ ಪತ್ರ ಪ್ರದಾನ ಮಾಡಲಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ಕೃಷ್ಣಭೈರೇಗೌಡ, ಕೆ.ಜೆ.ಜಾರ್ಜ್, ಬಂಡೆಪ್ಪ ಕಾಶಂಪುರ್, ಎನ್.ಎಚ್.ಶಿವಶಂಕರ್‍ರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Edited By

Manjula M

Reported By

Manjula M

Comments