ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಶಾಕ್!!

20 Dec 2019 12:05 PM | General
492 Report

ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಇದೀಗ ಸಕ್ಕರೆ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಳೆಯಿಂದ ಕಬ್ಬು ಬೆಳೆಗಾರರು ಅತಿ ಹೆಚ್ಚು ನಷ್ಟ ಅನುಭವಿಸಿದರ ಪರಿಣಾಮ ಸಕ್ಕರೆ ಉತ್ಪಾದನೆಯಲ್ಲಿ ಶೇ. 35 ರಷ್ಟು ಕುಸಿತ ಕಂಡಿದೆ, ಇದೆ ಕಾರಣಕ್ಕೆ ಸಕ್ಕರೆ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸಕ್ಕರೆ ಉತ್ಪಾದನೆ 70.5 ಲಕ್ಷ ಟನ್ ಆಗಿತ್ತು.

Edited By

venki swamy

Reported By

venki swamy

Comments