ಬಿಬಿಎಂಪಿ198 ವಾರ್ಡ್‌ಗಳ ಅಭಿವೃದ್ಧಿಗೆ ಸರಕಾರ ಬದ್ದವಾಗಿದೆ- ಕೆ.ಜೆ ಜಾರ್ಜ್

30 Aug 2017 8:54 PM | Politics
283 Report

ಬೆಂಗಳೂರು: ಬಿಬಿಎಂಪಿಗೆ ಮೇಯರ್ ಸ್ಥಾನ ಬಿಟ್ಟುಕೊಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಬಿಎಂಪಿಯಲ್ಲಿ ಜೆಡಿಎಸ್‌ ಕಾರ್ಪೋರೇಟರ್‌ಗಳ ಸಂಖ್ಯೆ ಎಷ್ಟಿದೆ?ಎಂದು ಪ್ರಶ್ನೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿ ಕಡಿದುಕೊಳ್ಳುವ ಬಗ್ಗೆ ಚರ್ಚಿಸಿಲ್ಲ. ಮೈತ್ರಿ ಮುಂದುವರಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

ಬೆಂಗಳೂರು: ಬಿಬಿಎಂಪಿಗೆ ಮೇಯರ್ ಸ್ಥಾನ ಬಿಟ್ಟುಕೊಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಬಿಎಂಪಿಯಲ್ಲಿ ಜೆಡಿಎಸ್‌ ಕಾರ್ಪೋರೇಟರ್‌ಗಳ ಸಂಖ್ಯೆ ಎಷ್ಟಿದೆ?ಎಂದು ಪ್ರಶ್ನೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿ ಕಡಿದುಕೊಳ್ಳುವ ಬಗ್ಗೆ ಚರ್ಚಿಸಿಲ್ಲ. ಮೈತ್ರಿ ಮುಂದುವರಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ. ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರು ಹಿರಿಯರು ಅವರಿಗೆ ಎಲ್ಲವು ಗೊತ್ತಿದೆ. ಮೈತ್ರಿ ಮುಂದುವರಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಕಾಂಗ್ರೆಸ್ ಸರಕಾರ ಜಿಡಿಎಸ್, ಕಾಂಗ್ರೆಸ್, ಬಿಜೆಪಿ ಕಾರ್ಪೋರೇಟರ್‌ಗಳ ಮಧ್ಯ ತಾರತಮ್ಯ ಮಾಡಿಲ್ಲ. ಎಲ್ಲಾ 198 ವಾರ್ಡ್‌ಗಳ ಅಭಿವೃದ್ಧಿಗೆ ಸರಕಾರ ಬದ್ದವಾಗಿದೆ. ಸರಕಾರದ ಸಹಕಾರದ ಬಗ್ಗೆ ಎಲ್ಲಾ ಕಾರ್ಪೋರೇಟರ್‌ಗಳಿಗೂ ಗೊತ್ತಿದೆ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ ಎನ್ನುವುದನ್ನು ಜೆಡಿಎಸ್ ಮುಖಂಡರು ಮರೆಯಬಾರದು ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಕಿವಿಮಾತು ಹೇಳಿದ್ದಾರೆ

 

Edited By

venki swamy

Reported By

Sudha Ujja

Comments