'ಕರ್ನಾಟಕದ ಜನತೆ ಕಾಂಗ್ರೆಸ್ ನ್ನು ಕಸದ ಬುಟ್ಟಿಗೆ ಎಸೀತಾರೆ’

05 Sep 2017 1:04 AM | Politics
386 Report

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ ನ್ನು ಕಸದ ಬುಟ್ಟಿಗೆ ಎಸೀತಾರೆ’ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಆಯ್ಕೆಯಾಗಿರುವ ಪ್ರಕಾಶ್ ಜಾವೇಡ್ಕರ್ ಹೇಳಿದ್ದಾರೆ.

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದ ಜನತೆ ಕಾಂಗ್ರೆಸ್ ನ್ನು ಕಸದ ಬುಟ್ಟಿಗೆ ಎಸೀತಾರೆ’ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಆಯ್ಕೆಯಾಗಿರುವ ಪ್ರಕಾಶ್ ಜಾವೇಡ್ಕರ್ ಹೇಳಿದ್ದಾರೆ. ಪಕ್ಷದ ನಾಯಕರೊಂದಿಗೆ ಸಭೆ ನಡೆಸಲು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಮಾತನಾಡಿರುವ ಅವರು, ಕಾಂಗ್ರೆಸ್ ಅನ್ನು ಜನರು ಕಸದ ಬುಟ್ಟಿಗೆ ಎಸೀತಾರೆ ಎಂದಿದ್ದಾರೆ. ನಿನ್ನೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಮೊದಲು ಮಾಡಿದ್ದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಕೆಲಸ. ಈ ವೇಳೆ ಮಾತನಾಡಿದ ಅವರು ‘ಇಂತಹ ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಕ್ಷಮಿಸೋಲ್ಲ ಎಂದಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಣತಿಯಂತೆ ಸರಣಿ ಸಭೆ ನಡೆಸಲಿರುವ ಅವರು ಪಕ್ಷವನ್ನು ಚುನಾವಣೆಗೆ ಹೇಗೆ ಸಂಘಟಿಸಬೇಕೆಂದು ಚರ್ಚೆ ನಡೆಸಲಿದ್ದಾರೆ.

 

 

Edited By

Shruthi G

Reported By

Sudha Ujja

Comments