ಜೆಡಿಎಸ್ ಸೇರುವ ಕುರಿತು ಸಿ.ಪಿ.ಯೋಗೇಶ್ವರ್ ನನ್ನೊಂದಿಗೆ ಚರ್ಚಿಸಿಲ್ಲ : ಎಚ್ ಡಿಕೆ

13 Oct 2017 5:46 PM | Politics
464 Report

ಯೋಗೇಶ್ವರ್ ಕಾಂಗ್ರೆಸ್ ಸಂಬಂಧ ಕಡಿದುಕೊಂಡು ಜೆಡಿಎಸ್ ಸೇರಲಿದ್ದಾರೆ ಎಂಬ ವದಂತಿಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ,ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್‍ಸ್ವಾಮಿ ಚುನಾವಣೆ ಸಂದರ್ಭದಲ್ಲಿ ಇಂತಹ ವದಂತಿಗಳು ಸಾಮಾನ್ಯವಾಗಿರುತ್ತವೆ. ಆದರೆ ಈವರೆಗೂ ಯೋಗೇಶ್ವರ್ ತಮ್ಮೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ. ಅಂತಹ ಸಂದರ್ಭ ಬಂದರೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.

ಪಿ.ಯೋಗೇಶ್ವರ್ ಜೆಡಿಎಸ್ ಸೇರುವ ಸಂಬಂಧ ಈವರೆಗೂ ತಮ್ಮೊಂದಿಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್‍ಸ್ವಾಮಿ ಹೇಳಿದ್ದಾರೆ. ಸದ್ಯಕ್ಕೆ ಯೋಗೇಶ್ವರ್ ಅವರು ಕಾಂಗ್ರೆಸ್‍ನಲ್ಲಿದ್ದಾರೆ. ಮೊದಲು ಅವರು ಜೆಡಿಎಸ್ ಸೇರುವ ಸಂಬಂಧ ಪಕ್ಷದ ಮುಖಂಡರ ಜೊತೆ ಚರ್ಚೆ ನಡೆಸಲಿ. ನಂತರ ಪ್ರತಿಕ್ರಿಯೆ ಕೊಡುವುದು ಸೂಕ್ತ ಎಂದರು. ಯೋಗೇಶ್ವರ್ ಕಾಂಗ್ರೆಸ್ ಸಂಬಂಧ ಕಡಿದುಕೊಂಡು ಜೆಡಿಎಸ್ ಸೇರಲಿದ್ದಾರೆ ಎಂಬ ವದಂತಿಗಳು ವ್ಯಾಪಕವಾಗಿದ್ದವು.

Edited By

Suresh M

Reported By

Madhu shree

Comments