A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ಮಹಾಮಳೆಯಿಂದ 1880 ಕೋಟಿಗೂ ಅಧಿಕ ನಷ್ಟ ಕೇಂದ್ರಕ್ಕೆ ಜಾರ್ಜ್ ಮನವಿ | Civic News

ಮಹಾಮಳೆಯಿಂದ 1880 ಕೋಟಿಗೂ ಅಧಿಕ ನಷ್ಟ ಕೇಂದ್ರಕ್ಕೆ ಜಾರ್ಜ್ ಮನವಿ

16 Oct 2017 4:45 PM | Politics
376 Report

ತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಸುರಿಯುತ್ತಿರುವ ಮಹಾಮಳೆಯಿಂದ 1880ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ರಾಜ್ಯಸರ್ಕಾರವೇ ಎಲ್ಲವನ್ನು ಭರಿಸಲು ಸಾಧ್ಯವಿಲ್ಲ. ಹಾಗಾಗಿ ಕೇಂದ್ರ ಸರ್ಕಾರವೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಬೆಂಗಳೂರು ಮಹಾನಗರದಲ್ಲಿ ಮಳೆಯಿಂದ ಉಂಟಾಗಿರುವ ನಷ್ಟದ ಪ್ರಮಾಣವನ್ನು ಸರಿದೂಗಿಸಲು ರಾಜ್ಯವನ್ನು ಪ್ರತಿನಿಧಿಸುವ ಸಚಿವರು ಕೇಂದ್ರದ ಮೇಲೆ ಒತ್ತಡ ಹಾಕಬೇಕೆಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ವಿಶೇಷ ಅನುದಾನವನ್ನು ಒದಗಿಸಬೇಕು. ಸಂಸದರು, ರಾಜ್ಯಸಭಾ ಸದಸ್ಯರು ಈ ನಿಟ್ಟಿನಲ್ಲಿ ಹೆಚ್ಚು ಕಾಳಜಿ ವಹಿಸುವಂತೆ ಕೋರಿದರು. ರಾಜ್ಯಸರ್ಕಾರ ಈಗಾಗಲೇ ಮಹಾನಗರಕ್ಕೆ ನೂರಾರು ಕೋಟಿ ಹಣ ಬಿಡುಗಡೆ ಮಾಡಿದೆ. ಬೆಂಗಳೂರು ನಗರಕ್ಕೆ ಕೇಂದ್ರದಿಂದ ಯಾವುದೇ ಅನುದಾನ ಬಂದಿಲ್ಲ. ಜೊತೆಗೆ ಶಾಸಕರು, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನವೂ ಇಲ್ಲ. ಎಲ್ಲವನ್ನು ರಾಜ್ಯಸರ್ಕಾರ ಪರಿಹರಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.

ವಿಶೇಷವಾಗಿ ರಾಜ್ಯಸಭಾ ಸದಸ್ಯರು ಹೆಚ್ಚಿನ ಅನುದಾನ ಒದಗಿಸಲು ಮುಂದಾಗಬೇಕು. ಈಗಾಗಲೇ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ ಮಹಾಮಳೆಯಿಂದ ಉಂಟಾಗಿರುವ ಸಮಸ್ಯೆ ಪರಿಹರಿಸಲು ನಾವೂ ಸಹ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇವೆ. ಇದ್ದಕ್ಕಿದ್ದಂತೆ ಭಾರೀ ಪ್ರಮಾಣದ ಮಳೆ ಬಂದಿದ್ದರಿಂದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಸಾರ್ವಜನಿಕರಿಗೆ ಸಮಸ್ಯೆಉಂಟಾಗಿದೆ. ನಗರದ ಅನೇಕ ಕಡೆ ಗುಂಡಿಬಿದ್ದಿರುವ ರಸ್ತೆಗಳಿಗೆ ಕಾಲಮಿತಿಯೊಳಗೆ ಸರಿಪಡಿಸಲಾಗುವುದು ಎಂದು ಹೇಳಿದರು.

ಒಟ್ಟು 24 ಸಾವಿರ ಗುಂಡಿಗಳನ್ನು ಗುರುತಿಸಲಾಗಿದ್ದು, ಈಗಾಗಲೇ 12 ಸಾವಿರ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ಕೂಡ ಹಗಲು-ರಾತ್ರಿಯೆನ್ನದೆ ಕೆಲಸ ಮಾಡುತ್ತಿದ್ದಾರೆ. ಮಳೆ ನಿಂತ ತಕ್ಷಣ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸುವುದಾಗಿ ತಿಳಿಸಿದರು. ನಗರದಲ್ಲಿ ವಿವಿಧ ರೀತಿಯ ಸೌಲಭ್ಯಗಳನ್ನು ಕಲ್ಪಿಸಲು ಒಟ್ಟು 3,650 ಕೋಟಿ ರೂ. ವೆಚ್ಚದಲ್ಲಿ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಕುಡಿಯುವ ನೀರು, ಒಳಚರಂಡಿ, ಪೈಪ್‍ಲೈನ್ ಸೇರಿದಂತೆ ಮತ್ತಿತರ ಮೂಲಸೌಲಭ್ಯ ಕಲ್ಪಿಸುವುದಾಗಿ ಹೇಳಿದರು.

Edited By

Shruthi G

Reported By

Madhu shree

Comments