ತೃಣಮೂಲ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಗೊಂಡ ಮುಕುಲ್ ರಾಯ್

04 Nov 2017 12:04 AM | Politics
215 Report

ನವದೆಹಲಿ: ತೃಣಮೂಲ ಕಾಂಗ್ರೆಸ್ ಬಿಟ್ಟು ಬಿಜೆಪಿ ಗೆ ಮುಕುಲ ರಾಯ್ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿರುವ ಅವರು. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೆಲಸ ಮಾಡುವುದು ನನಗೆ ಹೆಮ್ಮೆಯ ವಿಷಯ ಎಂದು ತಿಳಿಸಿದರು.

ನವದೆಹಲಿ: ತೃಣಮೂಲ ಕಾಂಗ್ರೆಸ್ ಬಿಟ್ಟು ಬಿಜೆಪಿ ಗೆ ಮುಕುಲ ರಾಯ್ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿರುವ ಅವರು. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೆಲಸ ಮಾಡುವುದು ನನಗೆ ಹೆಮ್ಮೆಯ ವಿಷಯ, ಕೆಲವೊಮ್ಮೆ ತೃಣಮೂಲ ಕಾಂಗ್ರೆಸ್ ಬಿಜೆಪಿ ಜತೆಗೆ. ಮತ್ತೆ ಕೆಲವೊಮ್ಮೆ ಕಾಂಗ್ರೆಸ್ ಜತೆಗೆ ಇರುತ್ತದೆ ಎಂದು ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ ಮುಕಾಲ್ ರಾಯ್ ಹವಾ ಜೋರಾಗಿದೆ. ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಬಳಿಕ ಮುಕುಲ್ ರಾಯ್ ಅವರ ಹೆಸರು ಕೇಳಿ ಬರುತ್ತದೆ. ಅಷ್ಟರ ಮಟ್ಟಿಗೆ ಪಶ್ಚಿಮ ಬಂಗಾಳದಲ್ಲಿ ಖ್ಯಾತಿ ಗಳಿಸಿರುವ ಮುಕುಲ್ ರಾಯ್ ಬಿಜೆಪಿ ಗೆ ಸೇರ್ಪಡೆಗೊಂಡಿದ್ದಾರೆ. ಶಾರದಾ ಹಗರಣದಲ್ಲಿ ಮುಕುಲ್ ರಾಯ್ ಶಾಮೀಲಾಗಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು. ಇದರಿಂದ ಮುಕುಲ್ ರಾಯ್ ಅವರನ್ನು ತೃಣಮೂಲ ಕಾಂಗ್ರೆಸ್ ಉಚ್ಛಾಟನೆ ಮಾಡಿತ್ತು.

 

Edited By

venki swamy

Reported By

Sudha Ujja

Comments