ಮಗಳ ಅದ್ದೂರಿ ಮದುವೆಯಿಂದ ರೆಡ್ಡಿಗೆ ಕಂಟಕ

08 Nov 2017 12:11 PM | Politics
258 Report

ರೆಡ್ಡಿ ಮಗಳು ಬ್ರಹ್ಮಣಿ - ರಾಜೀವ್ರೆಡ್ಡಿ ಮದುವೆಯ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳ ತಂಡ ರೆಡ್ಡಿ ಅವರ ಕಚೇರಿಯ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿತ್ತು. 

ಬೆಂಗಳೂರಿನ ಅರಮನೆ ಆವರಣದಲ್ಲಿ ನ.17, 2016ರಲ್ಲಿ ಬಹುಕೋಟಿ ರೂ. ವೆಚ್ಚದಲ್ಲಿ ನಡೆದಿರುವ ಜನಾರ್ದನ ರೆಡ್ಡಿ ಅವರ ಮಗಳ ಮದುವೆ ನಡೆದಿತ್ತು. ಈ ಮದುವೆಗೆ ಆದಾಯದ ಮೂಲದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಗಣಿ ಉದ್ಯಮಿ ಟಪಾಲ್ ಗಣೇಶ್ ಎಂಬವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಪ್ರಧಾನಿ ಕಚೇರಿಯು ಟಪಾಲ್ ಗಣೇಶ್ ಪತ್ರಕ್ಕೆ ಸ್ಪಂದಿಸಿದ್ದು, ಕೇಂದ್ರ ವಿಚಕ್ಷಣ ದಳ ಈ ಸಂಬಂಧ ಸಿಬಿಐಗೆ ಪತ್ರ ಬರೆದಿದೆ, ಇದೀಗ ಸಿಬಿಐ ರೆಡ್ಡಿ ಮಗಳ ಅದ್ದೂರಿ ಮದುವೆಗೆ ಆದಾಯದ ಮೂಲದ ಬಗ್ಗೆ ಸಿಬಿಐ ತನಿಖೆಗೆ ಮುಂದಾಗಿದೆ ಎಂದು ತಿಳಿದು ಬಂದಿದೆ. ರೆಡ್ಡಿ ಮಗಳು ಬ್ರಹ್ಮಣಿ - ರಾಜೀವ್ರೆಡ್ಡಿ ಮದುವೆಯ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳ ತಂಡ ರೆಡ್ಡಿ ಅವರ ಕಚೇರಿಯ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿತ್ತು. 

Edited By

Hema Latha

Reported By

Madhu shree

Comments