ಜನವರಿ ಅಂತ್ಯಕ್ಕೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮ : ಸಿಎಂ

18 Nov 2017 3:02 PM | Politics
540 Report

ರಾಜ್ಯದಲ್ಲಿ ಬಿಜೆಪಿ ಅತ್ಯಂತ ದುರ್ಬಲ ಪಕ್ಷ. ಅವರು ಅಭ್ಯರ್ಥಿಗಳಿಗಾಗಿ ತಡಕಾಡುತ್ತಿದ್ದಾರೆ. ಬಿಜೆಪಿಯ ಸಾಕಷ್ಟು ಮುಖಂಡರು ನನ್ನ ಜತೆ ಸಂಪರ್ಕದಲ್ಲಿದ್ದಾರೆ' ಎಂದು ತಿಳಿಸಿದರು. 'ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ ಅಂತ್ಯಕ್ಕೆ ಅಂತಿಮಗೊಳಿಸಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವೈದ್ಯರು ತಪ್ಪು ಗ್ರಹಿಕೆಯಿಂದ ಮುಷ್ಕರ ನಡೆಸಿದ್ದರು. ಅವರೊಂದಿಗೆ ಸಮಾಲೋಚನೆ ನಡೆಸಿ ಆ ಸಮಸ್ಯೆಯನ್ನು ಪರಿಹರಿಸಿದ್ದೇವೆ. ಸರ್ಕಾರ ಯೂನಿವರ್ಸಲ್ ಹೆಲ್ತ್ ಸ್ಕಿಂ ಅನ್ನು ಜಾರಿಗೊಳಿಸಲು ವೈದ್ಯರು ಒಪ್ಪಿಗೆ ನೀಡಿದ್ದಾರೆ. ಅದಕ್ಕೆ ದರ ನಿಗದಿಪಡಿಸುವುದು ಸರ್ಕಾರ' ಎಂದು ಸ್ಪಷ್ಟಪಡಿಸಿದರು.

Edited By

Shruthi G

Reported By

Madhu shree

Comments