ಸಭೆಯಲ್ಲಿ, ಮದ್ಯ ನಿಷೇಧಕ್ಕೆ ಮುನ್ನುಡಿ ಬರೆದವರು ಯಾರೆಂಬುದೇ ಗದ್ದಲ

21 Nov 2017 3:19 PM | Politics
235 Report

ಯಡಿಯೂರಪ್ಪ ಅವರು ಸಾರಾಯಿ ನಿಷೇಧ ಮಾಡಿ ಮದ್ಯ ನಿಷೇಧಕ್ಕೆ ಮುನ್ನುಡಿ ಬರೆದಿದ್ದರು ಎಂದು ಬಿಜೆಪಿ ಸದಸ್ಯರು ಹೇಳಿದಾಗ ಮಧ್ಯ ಪ್ರವೇಶ ಮಾಡಿದ ಮುಖ್ಯಮಂತ್ರಿಗಳು 'ಸಾರಾಯಿ ನಿಷೇಧ ಮಾಡಿದ್ದು ಕುಮಾರಸ್ವಾಮಿ, ಯಡಿಯೂರಪ್ಪ ಅಲ್ಲ, ಸಾರಾಯಿ ನಿಷೇಧದ ಬಗ್ಗೆ ಯಡಿಯೂರಪ್ಪ ಅವರ ವಿರೋಧವಿತ್ತು' ಎಂದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿ ಸದನದ ಬಾವಿಗಿಳಿದು ಪ್ರತಿಭಟನೆ ಪ್ರಾರಂಭಿಸಿದರು.

ಪ್ರತಿಭಟನೆ ಜೋರು ಮಾಡಿದ ಬಿಜೆಪಿ ಸದಸ್ಯರು ಮುಖ್ಯಮಂತ್ರಿಗಳ ಮಾತನ್ನು ಕಡತದಿಂದ ತೆಗೆದುಹಾಕುವಂತೆ  ಒತ್ತಾಯಿಸಿದರು. ಗದ್ದಲ ಹೆಚ್ಚಾಗುತ್ತಿದ್ದಂತೆ ಸಭಾಪತಿಗಳು ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು. ನಂತರ ಕಲಾಪ ಆರಂಭವಾದಾಗಲೂ ಸಿದ್ದರಾಮಯ್ಯ ಅವರ ಮಾತನ್ನು ದಾಖಲೆಯಿಂದ ತೆಗೆಯುವಂತೆ ಜಗದೀಶ್ ಶೆಟ್ಟರ್ ಅವರು ಪಟ್ಟು ಹಿಡಿದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿದ್ದರಾಮಯ್ಯ ರೆಕಾರ್ಡ್ ನಿಂದ ತೆಗೆದು ಹಾಕುವ ಪ್ರಶ್ನೆಯೇ ಬರುವುದಿಲ್ಲ, ಬೇಕಾದರೆ ರೂಲ್ಸ್ ಓದುತ್ತೀನಿ ಎಂದು ರೂಲ್ಸ್ ಓದಿದರು. ಇದಕ್ಕೂ ಸುಮ್ಮನಾಗದ ಬಿಜೆಪಿ ಸದಸ್ಯರು 'ನಮಗೂ ರೂಲ್ಸ್ ಗೊತ್ತಿದೆ' ಎಂದು ಪ್ರತಿಭಟನೆ ಮುಂದುವರೆಸಿದರು.

Edited By

Hema Latha

Reported By

Madhu shree

Comments