ರಾಜ್ಯದಲ್ಲಿ ಮದ್ಯ ನಿಷೇಧದ ಯಶಸ್ಸು ಕುಮಾರಣ್ಣನಿಗೆ ಸಲ್ಲುತ್ತದೆ : ಸಿಎಂ

21 Nov 2017 4:05 PM | Politics
220 Report

ರಾಜ್ಯದಲ್ಲಿ ಸಾರಾಯಿ ನಿಷೇಧ ಮಾಡಿದ ಶ್ರೇಯ ಕುಮಾರಸ್ವಾಮಿಗೆ ಸಲ್ಲಬೇಕು, ಯಡಿಯೂರಪ್ಪ ಸಾರಾಯಿ ನಿಷೇಧ ವಿರೋಧಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಹೇಳಿಕೆ ನೀಡಿದ್ದು ಗದ್ದಲಕ್ಕೆ ಕಾರಣವಾಯಿತು.

ರಾಜ್ಯದಲ್ಲಿ ಮದ್ಯ ನಿಷೇಧದ ಬಗ್ಗೆ ಆರ್.ಬಿ.ತಿಮ್ಮಾಪುರ ಮಾತನಾಡಿ, ಮದ್ಯ ನಿಷೇಧ ಮಾಡುವ ಯೋಚನೆ ಸರ್ಕಾರಕ್ಕಿಲ್ಲ, ಇದು ಕೇವಲ ಊಹಾಪೋಹ ಎಂದರು. ಮದ್ಯ ನಿಷೇಧದ ಬಗ್ಗೆ 'ನ್ಯಾಷನಲ್ ಪಾಲಿಸಿ' ಮಾಡಲು ಹೇಳಿ, ಆಗ ನಿಷೇಧ ಮಾಡುತ್ತೇವೆ,ಸಿದ್ದರಾಮಯ್ಯ ಹೇಳಿದರು.

Edited By

venki swamy

Reported By

Madhu shree

Comments