ಒತ್ತುವರಿ ಮಾಡಿದವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ : ಕೆ ಜೆ ಜಾರ್ಜ್

23 Nov 2017 4:10 PM | Politics
244 Report

ರಮೇಶ್ ಅವರ ಆರೋಪಗಳಿಗೆ ಉತ್ತರಿಸಿದ ಬೆಂಗಳೂರು ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನಾವು ರಾಜಕಾಲುವೆ ವಿಚಾರದಲ್ಲಿ ಸಾಕಷ್ಟು ಕೆಲಸ ಮಾಡುತ್ತಿದ್ದೇವೆ, ಕಾಲುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ರಮೇಶ್ ಅವರಿಗೆ ವಸ್ತುಸ್ಥಿತಿಯ ಚಿತ್ರಣ ನೀಡಿದ ಜಾರ್ಜ್ 'ಹಣಕ್ಕೆ ಕೊರತೆ ಇಲ್ಲ ಆದರೆ ಕಾಮಗಾರಿ ನಿಧಾನವಾಗುತ್ತಿರುವುದಕ್ಕೆ ಭೌಗೋಳಿಕ ಕಾರಣಗಳಿವೆ' ಎಂದು ಕೆ ಜೆ ಜಾರ್ಜ್ ಗುಡುಗಿದರು.

 'ನೀವು ಕೂಡ ಮೇಯರ್ ಆಗಿದ್ದವರು ನಿಮಗೂ ಸಮಸ್ಯೆಯ ಬಗ್ಗೆ ಅರಿವಿರಬೇಕು' ಎಂದರು. ರಾಜಕಾಲುವೆ ಒತ್ತುವರಿ ತೆರವಿನ ಬಗ್ಗೆ ಇದೇ ವೇಳೆ ಮಾತನಾಡಿದ ಜಾರ್ಜ್ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಬೆಂಗಳೂರಿನಲ್ಲಿ ಚೆನ್ನಾಗಿ ನಡೆದಿದೆ. ಕಲಾಪದಲ್ಲಿ ಶಾಸಕ ಪಿ.ಆರ್.ರಮೇಶ್ ಅವರು 'ರಾಜಕಾಲುವೆಗಳ ನಿರ್ಮಾಣದಲ್ಲಿ ಹಣ ಲೂಟಿಯಾಗಿದೆ ಎಂದು ಆರೋಪ ಮಾಡಿದರು. ರಾಜ ಕಾಲುವೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ 'ಲೋಕಾಯುಕ್ತದಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಸದನಕ್ಕೆ ಮಾಹಿತಿ ನೀಡಲಾಗಿದೆ. ಆದರೆ ಇದು ಸುಳ್ಳು ನನ್ನ ವಿರುದ್ಧವೇ ಲೋಕಾಯುಕ್ತದಲ್ಲಿ ಪ್ರಕರಣ ಒಂದಿದೆ' ಎಂದು ಶಾಸಕ ಪಿ.ಆರ್.ರಮೇಶ್ ಸತ್ಯ ಹೊರಹಾಕಿದರು. 

Edited By

Hema Latha

Reported By

Madhu shree

Comments