ಪಕ್ಷದ ದ್ರೋಹಿಗಳಿಗೆ ತಕ್ಕ ಪಾಠ ಕಲಿಸಲು ಎಚ್ ಡಿ ಡಿ ಮಾಸ್ಟರ್ ಪ್ಲಾನ್
ಚಲುವರಾಯಸ್ವಾಮಿ ಸೇರಿದಂತೆ ಪಕ್ಷಕ್ಕೆ ದ್ರೋಹ ಬಗೆದಿರುವ ಎಲ್ಲರಿಗೂ ತಕ್ಕ ಪಾಠ ಕಲಿಸಲು ಕಾರ್ಯಕರ್ತರು ತಮ್ಮಲ್ಲಿರುವ ಭಿನ್ನಾಭಿಪ್ರಾಯವನ್ನು ಬಿಟ್ಟು ಒಗ್ಗೂಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆ ನೀಡಿದರು.
ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪಟ್ಟಣದಲ್ಲಿ ಜೆಡಿಎಸ್ ನ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ನಮ್ಮ ಪಕ್ಷದ ಸುರೇಶ್ ಗೌಡರನ್ನು ಗೆಲ್ಲಿಸುವ ಮೂಲಕ ಜೆಡಿಎಸ್ ಪಕ್ಷಕ್ಕೆ ಬಲ ತುಂಬಬೇಕು ಎಂದರು. ಕಾಂಗ್ರೆಸ್, ಬಿಜೆಪಿ ರೈತರ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ರೈತರ ಜೊತೆ ನಾವು ನಿಲ್ಲಬೇಕೆಂದು ಕರೆ ಕೊಟ್ಟಿದ್ದಾರೆ.
Comments