ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ಅಂಬರೀಷ್ ಸ್ಪಷ್ಟನೆ

28 Nov 2017 1:44 PM | Politics
349 Report

ಕಾಂಗ್ರೆಸ್ ತೊರೆಯುವ ಮನಸ್ಸು ಮಾಡಿಲ್ಲ ಎಂದು ಮಾಜಿ ಸಚಿವ ಕಾಂಗ್ರೆಸ್ ಶಾಸಕ ಅಂಬರೀಷ್ ಮಂಗಳವಾರ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

 'ನಾನು ನಿತ್ಯ ಬಿಜೆಪಿ, ಜೆಡಿಎಸ್ನವರೊಂದಿಗೆ ಮಾತನಾಡುತ್ತೇನೆ. ಅವರು ಕಾರ್ಯಕ್ರಮಕ್ಕೆ ಕರೆದರೆ ಹೋಗುತ್ತೇನೆ' ಎಂದರು.'ಹೈಕಮಾಂಡ್ ಮತ್ತೆ ಟಿಕೇಟ್ ನೀಡಿದರೆ ಮಾತ್ರ ಸ್ಪರ್ಧಿಸುತ್ತೇನೆ. ನನ್ನ ಪತ್ನಿಗಾಗಲಿ,ಪುತ್ರನಿಗಾಗಲಿ ರಾಜಕೀಯದಲ್ಲಿ ಆಸಕ್ತಿ ಇಲ್ಲ' ಎಂದರು. ಇದೇ ವೇಳೆ 'ರಮ್ಯಾ ಅವರು ಸ್ಪರ್ಧಿಸಿದರೆ ಸ್ವಾಗತಿಸುತ್ತೇನೆ' ಎಂದರು.

Edited By

Hema Latha

Reported By

Madhu shree

Comments

Cancel
Done