'ಪ್ರಚಾರ'ಕ್ಕೆ ಬಿಜೆಪಿ ಯಂತೆ ತಮಟೆ ಬಾರಿಸಿಕೊಂಡು ಹೋಗುವುದಿಲ್ಲ.! CM

28 Nov 2017 8:27 PM | Politics
272 Report

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ ನೀಡಿದ್ದಾರೆ. ಮುಂದಿನ ಕಾಂಗ್ರೆಸ್ ನ ಪ್ರಧಾನ ಮಂತ್ರಿ ಅಭ್ಯರ್ಥಿ ನಿವಂತೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ ನೀಡಿದ್ದಾರೆ. ಮುಂದಿನ ಕಾಂಗ್ರೆಸ್ ನ ಪ್ರಧಾನ ಮಂತ್ರಿ ಅಭ್ಯರ್ಥಿ ನಿವಂತೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಕೆಲವರು ಚಂದ್ರಲೋಕಕ್ಕೆ ಹೋಗುತ್ತಾರೆ. ಹಾಗಂತ ನಾನು ಚಂದ್ರಲೋಕಕ್ಕೆ ಹೋಗುವುದಕ್ಕೆ ಆಗುತ್ತಾ? ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾನು ಗುಜುರಾತ್ ಪ್ರಚಾರಕ್ಕೆ ತೆರಳುತ್ತಿಲ್ಲ. ಕಾಂಗ್ರೆಸ್ ನಲ್ಲಿ ಸಾಕಷ್ಟು ರಾಷ್ಟ್ರೀಯ ನಾಯಕರಿದ್ದಾರೆ. ಸಚಿವ ಡಿ.ಕೆ ಶಿ ಪ್ರಚಾರಕ್ಕೆ ಹೋಗಬಹುದು ಎಂದು ಹೇಳಿದರು. ಡಿಸೆಂಬರ್ 13ರಿಂದ ನಾನು ರಾಜ್ಯ ಪ್ರವಾಸ ಮಾಡುತ್ತೇನೆ,ಪಕ್ಷದ ವತಿಯಿಂದಲು ಪ್ರಚಾರ ನಡೆಸುತ್ತೇವೆ. ಸರ್ಕಾರದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರು ಬರುವಂತಿಲ್ಲ , ಅವರು ಕರೆದಾಗ ನಾನು ಹೋಗುತ್ತೇನೆ ಎಂದರು.

ಮಾರ್ಚ್ ವೇಳೆಗೆ ನಾನು ಮತ್ತು ಪಕ್ಷದ ಅಧ್ಯಕ್ಷರು ಜಂಟಿ ಆಗಿ ಪ್ರಚಾರಕ್ಕೆ ತೆರಳುತ್ತೇವೆ. ಬಿಜೆಪಿ ಅಂತೆ ತಮಟೆ
ಬಾರಿಸಿಕೊಂಡು ಹೋಗುವುದಿಲ್ಲ ಎಂದು ಹೇಳಿದರು. ಯೋಗೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ಅವರು ಸಾಂಕೇತಿಕ ಪ್ರತಿಭಟನೆ ಮಾಡಲಿ, ಬೇಕಾದರೆ ಸಾಂಕ್ರಾಮಿಕ ಪ್ರತಿಭಟನೆ ಯನ್ನಾದರೂ ಮಾಡಲಿ, ಸಚಿವ ಕುಲಕರ್ಣಿ ಅವರ ಹೆಸರಿಗೆ ಮಸಿ ಬಳಿಯಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ.ಈಗಾಗ್ಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗಿದೆ ಎಂದು ಅವರು ಹೇಳಿದರು.

Edited By

venki swamy

Reported By

Sudha Ujja

Comments