ರಾಜ್ಯ ರಾಜಕಾರಣದ ಬದಲಾವಣೆ ಕುರಿತು ಭವಿಷ್ಯ ನುಡಿದ ಬಿ ಎಸ್ ವೈ

02 Dec 2017 11:40 AM | Politics
383 Report

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ಅನೇಕರು ಪಕ್ಷಕ್ಕೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಕೆಲವು ದಿನಗಳವರೆಗೂ ಕಾದು ನೋಡಿ ಎಂದು ಸೂಚ್ಯವಾಗಿ ಹೇಳಿದರು. ನಮ್ಮ ಪಕ್ಷಕ್ಕೆ ಬಂದವರೆಲ್ಲರಿಗೂ ಟಿಕೆಟ್ ನೀಡುವ ಖಾತರಿಯನ್ನು ಕೊಡುವುದಿಲ್ಲ. ಪಕ್ಷದ ನಾಯಕತ್ವ ಹಾಗೂ ಸಿದ್ದಾಂತಗಳನ್ನು ಒಪ್ಪಿಕೊಂಡು ಯಾರೇ ಬಂದರೂ ಅಂಥವರಿಗೆ ಮುಕ್ತ ಸ್ವಾಗತ ನೀಡಲಾಗುವುದು. ರು.

ನಾಯಕತ್ವಕ್ಕಾಗಿಯೇ ಪಕ್ಷ ಸೇರ್ಪಡೆಯಾಗುವವರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ತೊರೆದು ಬಿಜೆಪಿ ಸೇರಲು ಕೆಲವರು ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ ಅಂಥವರ ಹೆಸರನ್ನು ಜನವರಿ 15ರ ನಂತರ ಬಹಿರಂಗ ಪಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಪಕ್ಷಗಳ ಕೆಲ ಮುಖಂಡರು ಪಕ್ಷ ಸೇರಲು ನನ್ನ ಜೊತೆ ಮಾತುಕತೆ ನಡೆಸಿದ್ದಾರೆ. ಕೆಲವು ತಾಂತ್ರಿಕ ಕಾರಣಗಳಿಂದ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿಲ್ಲ. ಜ.15ರ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಅವರು ಭವಿಷ್ಯ ನುಡಿದರು.

Edited By

venki swamy

Reported By

Madhu shree

Comments