ಜನಾಶೀರ್ವಾದ ರ‍್ಯಾಲಿ ಮುಂದೂಡಿದ ಸಿಎಂ ಸಿದ್ದರಾಮಯ್ಯ

05 Dec 2017 1:05 PM | Politics
408 Report

ಬಿಜೆಪಿಯ ಪರಿವರ್ತನಾ ರ‍್ಯಾಲಿ ಗೆ ಸೆಡ್ಡು ಹೊಡೆದಿದ್ದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷ ಜನಾಶೀರ್ವಾದ ರ‍್ಯಾಲಿ ನಡೆಸಲಿದೆ ಎಂದು ಘೋಷಿಸಿದ್ದರು. ಆದರೆ ಸಿಎಂ ಏಕಪಕ್ಷೀಯ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಇದರಿಂದಾಗಿ ಜನಾಶೀರ್ವಾದ ರ‍್ಯಾಲಿ ಮುಂದೂಡಿಕೆಯಾಗಿದೆ ಎಂದು ವರದಿ ತಿಳಿಸಿವೆ.

ಚುನಾವಣೆಯ ದೃಷ್ಟಿಕೋನದಿಂದ ಸಿಎಂ ಸಿದ್ದರಾಮಯ್ಯ ಅವರು ಡಿಸೆಂಬರ್ 15ರಿಂದ ರಾಜ್ಯಾದ್ಯಂತ ಜನಾಶೀರ್ವಾದ ರ‍್ಯಾಲಿ ನಡೆಸಲು ವೇಳಾಪಟ್ಟಿ ನಿಗದಿಪಡಿಸಿದ್ದರು. ಆದರೆ ಪರಮೇಶ್ವರ್ ಅವರು ಬಹಿರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಹೈಕಮಾಂಡ್ ಗಮನಕ್ಕೂ ತಂದಿದ್ದರು. ಇದೀಗ ಜನಾಶೀರ್ವಾದ ರ‍್ಯಾಲಿಯ ಹೆಸರು ಬದಲಾಯಿಸಿ ಸರ್ಕಾರಿ ಯೋಜನೆಗಳ ಶಂಕುಸ್ಥಾಪನೆ ಅನುಷ್ಠಾನ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಿದ್ದಾರೆ. 

Edited By

Hema Latha

Reported By

Madhu shree

Comments