'ಅನಂತಕುಮಾರ್ ಹೆಗಡೆ ವಿರುದ್ಧ ಸಿಎಂ ವಾಗ್ದಾಳಿ'

05 Dec 2017 11:04 PM | Politics
288 Report

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ವರದಿಯಾಗಿದೆ. ತನ್ನನ್ನು ಪಿಂಡ ಎಂದಿರುವ ಅನಂತ ಕುಮಾರ್ ಹೆಗಡೆ ಕೇಂದ್ರ ಸಚಿವರಾಗಲು ನಾಲಾಯಕ್ ಎಂದು ಸಿಎಂ ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ವರದಿಯಾಗಿದೆ. ತನ್ನನ್ನು ಪಿಂಡ ಎಂದಿರುವ ಅನಂತ ಕುಮಾರ್ ಹೆಗಡೆ ಕೇಂದ್ರ ಸಚಿವರಾಗಲು ನಾಲಾಯಕ್ ಎಂದು ಸಿಎಂ ಹೇಳಿದ್ದಾರೆ. ಅನಂತಕುಮಾರ್ ಹೇಳಿಕೆಗೆ ಹೆಚ್ಚು ಪ್ರತಿಕ್ರಿಯೆ ನೀಡುವ ಅವಶ್ಯಕತೆ ನನಗಿಲ್ಲ ಎಂದರು.

ಇದೇ ವೇಳೆ ಜನಾರ್ಶೀರ್ವಾದ ಯಾತ್ರೆಯ ಬಗ್ಗೆ ಮಾತನಾಡಿರುವ ಅವರು ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು
ಪ್ರತಿಕ್ರಿಯಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಾ ನಡೆಸುತ್ತಿರುವ ಯಾತ್ರೆಗಳಿಗೆ ಯಾವ ಹಣವನ್ನು ಬಳಸುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು, ಎಐಸಿಸಿ ಅಧ್ಯಕ್ಷರಾಗಿ
ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಿದರೆ ಪಕ್ಷದಲ್ಲಿ ದೊಡ್ಡ ಬದಲಾವಣೆ ಸಾಧ್ಯವಾಗುತ್ತದೆ ಎಂದರು.

 

Edited By

venki swamy

Reported By

Sudha Ujja

Comments