ಬಿಜೆಪಿಗೆ ಖಡಕ್ ವಾರ್ನಿಂಗ್ ಕೊಟ್ಟ ಡಿಕೆ ಶಿವಕುಮಾರ್

06 Dec 2017 11:15 AM | Politics
382 Report

ನಮ್ಮ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಮ್ಮ ಎಐಸಿಸಿ ಜನರಲ್‌ ಸೆಕ್ರೆಟರಿಗೆ 'ಗೋ ಬ್ಯಾಕ್' ಅಂದರೆ ಪರಿಣಾಮ ಸರಿ ಇರಲ್ಲ ಎಂದು ಬಿಜೆಪಿ ನಾಯಕರಿಗೆ ಕೈ ಬೆರಳು ತೋರಿಸಿ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.

ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ನಮ್ಮ ತಟ್ಟೆಯಲ್ಲಿನ ನೊಣ ತೋರಿಸಲು ಬರುತ್ತಿದ್ದಾರೆ. ಇದೇ ರೀತಿ ನಮ್ಮ ನಾಯಕರನ್ನ ಡಿಸ್ಟರ್ಬ್‌ ಮಾಡಿದರೆ, ಅವರ ನಾಯಕರ ವಿರುದ್ಧ ನಾವು ಹೋರಾಟ ಮಾಡಬೇಕಾಗುತ್ತದೆ. ಬಿಜೆಪಿಯವರಿಗಿಂತ ದೊಡ್ಡ ಹೋರಾಟ ಮಾಡುವಷ್ಟು ಶಕ್ತಿ ನಮ್ಮ ಕಾರ್ಯಕರ್ತರಿಗೆ ಇದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

Edited By

Hema Latha

Reported By

Madhu shree

Comments