ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ತಿರುಗೇಟು ಕೊಟ್ಟ ಜೆಡಿಎಸ್ ಅಭ್ಯರ್ಥಿ ವಿಶ್ವನಾಥ್
ಕೇಂದ್ರ ಸಚಿವ ಅನಂತ್ ಕುಮಾರ್ ಅವರನ್ನ ಸಚಿವರನ್ನಾಗಿ ಮಾಡಿರುವುದೇ ಹುಚ್ಚು ಹುಚ್ಚು ಹೇಳಿಕೆಗಳನ್ನು ನೀಡಿ ಜನರನ್ನು ಹುಚ್ಚೆಬ್ಬಿಸುವಂತೆ ಮಾಡುವುದಕ್ಕೆ ಎಂದು ಮಾಜಿ ಸಂಸದ ಎಚ್. ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಅನಂತ್ ಕುಮಾರ್ ಅವರು ನೀಡಿದ ವಿವಾದಾತ್ಮಕ ಹೇಳಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅನಂತ್ ಕುಮಾರ್ ಹೆಗಡೆ ಅವರು ಮೊದಲು ಅವರ ಅಪ್ಪ, ಅಮ್ಮ ಯಾರು ಎಂದು ತಿಳಿಸಬೇಕು. ನಂತರ ಬೇರೆಯರ ಬಗ್ಗೆ ಮಾತನಾಡಬೇಕು ಎಂದು ತಿರುಗೇಟು ನೀಡಿದರು.
Comments