ಜ. 7 ರಂದು ಇತರೆ ಪಕ್ಷಗಳ ನೂರಾರು ಮುಖಂಡರು ಜೆಡಿಎಸ್ ಗೆ ಸೇರ್ಪಡೆ

02 Jan 2018 10:12 AM | Politics
9603 Report

ಜನವರಿ 7ರಂದು ರಾಮನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ನಡೆಯುವ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಕ್ಷೇತ್ರದ ಇತರೆ ಪಕ್ಷಗಳ ನೂರಾರು ಮುಖಂಡರು ಪಕ್ಷ ಸೇರಲಿದ್ದಾರೆ.

ಆರ್ಥಿಕ ವಲಯ, ಸಾರಿಗೆ ಇಲಾಖೆ, ಕೃಷಿ ಇಲಾಖೆ ಅಧಿಕಾರಿಯಾಗಿ ಮತ್ತು ಮಾರುಕಟ್ಟೆ ವ್ಯವಸ್ಥೆ ಹೀಗೆ ಹತ್ತಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ನಾನು ಮನೋ ವಿಕಾಸ ತರಬೇತುದಾರನಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ್ದೇನೆ. ನನಗೆ ಇನ್ನೂ 20 ವರ್ಷಗಳ ಸರ್ಕಾರದ ಸೇವಾ ಅವಧಿ ಇದ್ದರೂ ಕೆಲಸಕ್ಕೆ ರಾಜೀನಾಮೆ ನೀಡಿ ಜನರ ಸೇವೆಯೇ ನನ್ನ ಗುರಿ ಎಂದು ಬಂದಿದ್ದೇನೆ ಎಂದು ತಿಪ್ಪೇಸ್ವಾಮಿ ತಿಳಿಸಿದರು.

ಕಳೆದ ಬಾರಿ ಚುನಾವಣಾ ಪ್ರಚಾರಕ್ಕೆ ಬಂದಾಗ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಳುಹಿಸಿದರೆ ಖಂಡಿತವಾಗಿ ಮಾಲ್ವಿ ಜಲಾಶಯಕ್ಕೆ ನೀರು ತರುವುದಾಗಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿ ಹೋಗಿದ್ದರು. ಆದರೆ ನಮ್ಮ ಪಕ್ಷ ಅಧಿಕಾರ ಹಿಡಿಯದಿದ್ದರೂ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಮಾಲ್ವಿ ಜಲಾಶಯಕ್ಕೆ ಶಾಶ್ವತ ನೀರು ಒದಗಿಸುವಂತೆ ಒತ್ತಾಯಿಸಿ ಹಗರಿಬೊಮ್ಮನಹಳ್ಳಿ ರೈತರು ಕಳೆದ ವರ್ಷ ನಡೆಸಿದ್ದ ಪ್ರತಿಭಟನೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾಗವಹಿಸಿದ್ದರು ಎಂದು ತಿಪ್ಪೇಸ್ವಾಮಿ ತಿಳಿಸಿದರು.ದೇವೇಗೌಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರಿಂದಲೇ ಇಂದು ಮಾಲ್ವಿ ಜಲಾಶಯಕ್ಕೆ ನೀರು ತರುವ ಯೋಜನೆಗೆ ಸರ್ಕಾರ ಅಸ್ತು ಎಂದಿದೆ. ಹಾಗಾಗಿ ಮಾಲ್ವಿ ಜಲಾಶಯಕ್ಕೆ ನೀರು ತರುವಲ್ಲಿ ಶಾಸಕರ ಪಾತ್ರ ಅಷ್ಟೇನು ಇಲ್ಲ. ಈ ಯಶಸ್ಸು ದೇವೇಗೌಡರು ಮತ್ತು ಹೋರಾಟಗಾರರಿಗೆ ಸಲ್ಲಬೇಕು ಎಂದು ತಿಪ್ಪೇಸ್ವಾಮಿ ಹೇಳಿದರು. 

Edited By

Suresh M

Reported By

Shruthi G

Comments