ತಮಿಳುನಾಡಿನಲ್ಲಿ ರಜಿನಿಕಾಂತ್ ಕಮಲ ಅರಳಿಸುತ್ತಾರಾ ?

02 Jan 2018 10:48 AM | Politics
306 Report

 ತಮಿಳು ಚಿತ್ರರಂಗದ ಸೂಪರ್​ ಸ್ಟಾರ್​ ರಜಿನಿಕಾಂತ್​ ರಾಜಕೀಯಕ್ಕೆ ಪ್ರವೇಶಿಸುವುದಾಗಿ ಭಾನುವರವಷ್ಟೆ ಘೋಷಿಸಿದ್ದು, ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ತಮಿಳು ನಾಡಿನ ಮೇಲೆ ಕಣ್ಣಿಟ್ಟಿರುವ ಕಮಲ ಪಾಳಯ ಈ ಅವಕಾಶವನ್ನು ಉಪಯೋಗಿಸಿಕೊಳ್ಳಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಮರಣದ ನಂತರ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಒದ್ದಾಡುತ್ತಿದ್ದ ಬಿಜೆಪಿಗೆ ಈಗ ದಾರಿಯೊಂದು ಕಂಡಂತಾಗಿದೆ. ರಜಿನಿಕಾಂತ್​ ಹಾಗೂ ಪ್ರಧಾನಿ ಮೋದಿ ಉತ್ತಮ ಸಂಬಂಧ ಹೊಂದಿದ್ದಾರೆ. ಕಳೆದ ತಿಂಗಳು ತಮಿಳು ನಾಡಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ರಜಿನಿಕಾಂತ್​ ಅವರನ್ನು ಭೇಟಿ ಕೂಡ ಮಾಡಿದ್ದರು.

ಈಗಾಗಲೇ ಹಲವು ಬಿಜೆಪಿ ನಾಯಕರು ತಲೈವಾನೊಂದಿಗೆ ಕೈ ಜೋಡಿಸುವ ಸೂಚನೆಯನ್ನು ಪರೋಕ್ಷವಾಗಿ ನೀಡತೊಡಗಿದ್ದಾರೆ. ಕೆಲವು ತಿಂಗಳ ಹಿಂದೆ ಈ ಕುರಿತು ಮಾತನಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ, ರಜಿನಿಕಾಂತ್​ ಅವರೊಂದಿಗೆ ಕೈ ಜೋಡಿಸುವ ಅವಕಾಶ ಸಿಕ್ಕರೆ ಬಿಜೆಪಿ ಅತ್ಯಂತ ಸಂತಸದಿಂದ ಒಪ್ಪಿಕೊಳ್ಳುತ್ತದೆ ಎಂದು ಕೂಡ ಹೇಳಿದ್ದರು. 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಲ್ಲ 234 ಸ್ಥಾನಗಳಿಗೆ ತಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ರಜಿನಿಕಾಂತ್​ ಹೇಳಿದ್ದಾರೆ.

Edited By

Shruthi G

Reported By

Madhu shree

Comments