ಸಮೀಕ್ಷೆಯಿಂದ ಬಯಲಾಯ್ತು, ಈ ಭಾರಿ ಅಧಿಕಾರಕ್ಕೇರೋರು ಯಾರುಗೊತ್ತೆ ?

06 Jan 2018 12:58 PM | Politics
23089 Report

ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಹಿರಿಯ ಅಧಿಕಾರಿಯೊಬ್ಬರು ಕಳೆದ ಒಂದು ತಿಂಗಳಿನಿಂದ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ವರ್ಚಸ್ಸು ವರ್ಕೌಟ್ ಆಗುತ್ತಿದ್ದು , ಜೆಡಿಎಸ್ ನಿರ್ಣಾಯಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮುಂದಿನ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎನ್ನುವುದನ್ನು ಸಮೀಕ್ಷೆ ದೃಢಪಡಿಸಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ, ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ತಂತ್ರಗಾರಿಕೆಗೆ ಮೊರೆ ಹೋಗಿದೆ. ಇದಕ್ಕಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಊರೂರು ಸುತ್ತುತ್ತಿದ್ದಾರೆ. ಈ ಬಾರಿ ಗ್ರಾಮೀಣ ಪ್ರದೇಶದಲ್ಲಿ ಹಾಗೂ ಉತ್ತರ ಕರ್ನಾಟಕದಲ್ಲಿ ಎಚ್.ಡಿ.ಕುಮಾರಸ್ವಾಮಿ ಪರ ಒಲವು ಕಂಡುಬರುತ್ತಿರುವುದರಿಂದ ಮುಂದಿನ ಚುನಾವಣೆಯಲ್ಲಿ ಎಚ್‍ಡಿಕೆ ಪವಾಡ ಸೃಷ್ಟಿಸಿದರೂ ಆಶ್ಚರ್ಯ ಪಡುವಂತಿಲ್ಲ. 

Edited By

Shruthi G

Reported By

Madhu shree

Comments

Narasimharaju Jds