ಬಿಜೆಪಿಯವರು ಊಸರವಳ್ಳಿ ಇದ್ದಂತೆ ಆಗಾಗ ಬಣ್ಣ ಬದಲಾಯಿಸುತ್ತಾರೆ : ಸಿಎಂ ಸಿದ್ದರಾಮಯ್ಯ

08 Jan 2018 10:41 AM | Politics
280 Report

"ಬಿಜೆಪಿಯವರು ಊಸರವಳ್ಳಿ ಇದ್ದ ಹಾಗೆ; ಆಗಾಗ ಬಣ್ಣ ಬದಲಾಯಿಸುವವರು," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. "ಕೆಲವರಿಗೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಬರುತ್ತದೆ ಎಂದು ಭಯವಿದೆ. ನಾನು ಸರಕಾರ ಹಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳುತ್ತಾರೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಗುಜಾರಾತ್ ಹಾಗೂ ವಿದೇಶಕ್ಕೆ ತಮ್ಮ ಸ್ವಂತ ದುಡ್ಡಿನಲ್ಲಿ ಹೋಗುತ್ತಾರಾ?," ಎಂದು ಪ್ರಶ್ನಿಸಿದರು . "ಯಡಿಯೂರಪ್ಪ ಸಿಎಂ ಇದ್ದಾಗ ಸಾಲ ಮನ್ನಾ ಮಾಡಿ ಎಂದಾಗ ನೋಟ್ ಪ್ರಿಂಟ್ ಆಗ್ತಿದೆಯಾ ಎಂದು ಕೇಳಿದ್ದರು. ಆದರೆ ಈಗ ನಾನು ಸಿಎಂ ಆದ್ರೆ ಸಾಲಮನ್ನಾ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯವರು ಡೋಂಗಿಗಳು, ರೈತ ವಿರೋಧಿಗಳು," ಎಂದು ಮುಖ್ಯಮಂತ್ರಿಗಳು ಕಿಡಿಕಾರಿದರು."ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಟಿಪ್ಪು ಸ್ವತಂತ್ರ ಪ್ರೇಮಿ ಎಂದಿದ್ದರು. ಆದರೆ ಇಂದು ಟಿಪ್ಪುವನ್ನು ಮತಾಂಧ ಎಂದು ಕರೆಯುತ್ತಿದ್ದಾರೆ. ಬಿಜೆಪಿಯವರು ಊಸರವಳ್ಳಿ ಇದ್ದ ಹಾಗೆ; ಆಗಾಗ ಬಣ್ಣ ಬದಲಾಯಿಸುವವರು," ಎಂದು ಹೇಳಿದ ಸಿದ್ದರಾಮಯ್ಯ, "ಯಡಿಯೂರಪ್ಪ ಅವರದು ಸೈಕಲ್, ಸೀರೆ ಬಿಟ್ಟರೆ ಜೈಲಿಗೆ ಹೋಗಿದ್ದೆ ಸಾಧನೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By

Shruthi G

Reported By

Madhu shree

Comments