ತೆನೆ ಹೊರುವುದನ್ನು ಬಿಟ್ಟು ಕಮಲ ಹಿಡಿಯಲು ಮುಂದಾದ ಶಾಸಕರು

17 Jan 2018 5:58 PM | Politics
596 Report

ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್ ನಾಳೆ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ವರಿಷ್ಠ ಎಚ್​.ಡಿ. ದೇವೇಗೌಡ, ಕಾರ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಬಗ್ಗೆ ಗೌರವವಿದೆ. ಆದರೆ ಜಿಲ್ಲಾ ಜೆಡಿಎಸ್ ನಾಯಕರ ವರ್ತನೆಯಿಂದ ಬೇಸರಗೊಂಡಿದ್ದು, ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಮುಂದೆ ಸರ್ಕಾರ ರಚನೆ ಕನಸು ಕಾಣಿತ್ತಿರುವ ಜೆಡಿಎಸ್'ಗೆ ದೊಡ್ಡಮಟ್ಟದ ಹೊಡೆದ ಬಿದ್ದಿದೆ. ಈಗಾಗಲೇ ಪಕ್ಷದ ವಿರುದ್ಧ ಬಂಡೆದ್ದ 6 ಮಂದಿ ಶಾಸಕರನ್ನು ಅಮಾನತು ಮಾಡಿದ ನಂತರ ಉತ್ತರ ಕರ್ನಾಟಕದ ಇಬ್ಬರು ಶಾಸಕರು ರಾಜೀನಾಮೆಗೆ ನಿರ್ಧರಿಸಿದ್ದಾರೆ. ಲಿಂಗಸಗೂರು ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಕೂಡ ಜೆಡಿಎಸ್ ತೆರೆದು ಬಿಜೆಪಿ ಸೇರುವ ಸಾಧ್ಯತೆಯಿದೆ. ಈ ಇಬ್ಬರು ನಾಯಕರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ವಕ್ತಾರ ರಮೇಶ್ ಬಾಬು ನಾವೇ ಅವರಿಬ್ಬರನ್ನು ಪಕ್ಷದಿಂದ ಹೊರ ಕಳುಹಿಸುತ್ತಿರುವುದಾಗಿ ತಿಳಿಸಿದ್ದಾರೆ.

Edited By

Shruthi G

Reported By

Madhu shree

Comments