ಬಿಜೆಪಿ ಮುಖಂಡ ಆರ್. ಅಶೋಕ್ ಬಂಧನ ಭೀತಿ ಎದುರಾಗಿದ್ಯಾ ..?

18 Jan 2018 10:52 AM | Politics
382 Report

ಗರ್ ಹುಕುಂ ಜಮೀನು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ್ ಭವಿಷ್ಯ ಇಂದು ನಿರ್ಧಾರವಾಗುವ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ, ಶಾಸಕ ಬಿಜೆಪಿ ಮುಖಂಡ ಆರ್. ಅಶೋಕ್ ಅವರಿಗೆ ಬಂಧನ ಭೀತಿ ಎದುರಾಗಿದೆ. ಎಸಿಬಿ ದಾಖಲಿಸಿರೋ ಎಫ್‍ಐಆರ್ ರದ್ದು ಕೋರಿ ಹೈಕೋರ್ಟ್‍ಗೆ ಆರ್ ಅಶೋಕ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ನ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಲಿದೆ. ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಅಧಿಕಾರಿಗಳನ್ನು ಎಸಿಬಿ ಬಂಧಿಸಿದೆ.

ಅಶೋಕ್ ಅವರನ್ನ ಬಂಧಿಸೋ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಅರ್ಜಿಯ ವಿಚಾರಣೆ ಮುಗಿಯುವವರೆಗು ಎಸಿಬಿ ವಿಚಾರಣೆಗೆ ತಾತ್ಕಾಲಿಕ ತಡೆ ನೀಡುವಂತೆ ಅಶೋಕ್ ಪರ ವಕೀಲರು ಇಂದು ಕೋರ್ಟ್ ಮುಂದೆ ಮನವಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಂದು ವೇಳೆ ತನಿಖೆಗೆ ಕೋರ್ಟ್ ತಡೆ ನೀಡಿದರೆ ಆರ್.ಅಶೋಕ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗುತ್ತದೆ. ಒಂದು ವೇಳೆ ತಡೆ ನೀಡದಿದ್ದರೆ ಅಶೋಕ್ ಅವರಿಗೆ ಬಂಧನ ಭೀತಿ ಎದುರಾಗಲಿದೆ.

Edited By

Shruthi G

Reported By

Madhu shree

Comments