ರೋಹಿಣಿ ಸಿಂಧೂರಿ ವರ್ಗಾವಣೆಯ ಬಗ್ಗೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

24 Jan 2018 11:20 AM | Politics
306 Report

ಜಿಲ್ಲಾಧಿಕಾರಿಯ ವರ್ಗಾವಣೆಯಲ್ಲಿ ಯಾವುದೇ ನಿಯಮವನ್ನು ಉಲ್ಲಂಘನೆ ಮಾಡಿಲ್ಲ. ಆಡಳಿತ ದೃಷ್ಠಿಯಿಂದ ರಾಜ್ಯ ಸರ್ಕಾರ ಕೈಗೊಂಡ ಕ್ರಮ ಸಮರ್ಥನೀಯವಾಗಿದೆ. ರಾಜ್ಯದಲ್ಲಿ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮಾಡುತ್ತಾರೆ ಎಂದಿದ್ದಾರೆ.

ರೋಹಿಣಿ ಸಿಂಧೂರಿ ಒಬ್ಬರೇ ಪ್ರಾಮಾಣಿಕ ಅಧಿಕಾರಿಯೇ ಎಂದು ದೇವೇಗೌಡ ಆರೋಪಕ್ಕೆ ಸಂಬಂಧಿಸಿ ಪ್ರಶ್ನಿಸಿದ್ದಾರೆ. ನಿಗದಿಯಂತೆಯೇ ಬಜೆಟ್ ಮಂಡನೆ ಮಾಡಲಾಗುವುದು, ಬಜೆಟ್ಗೂ ಚುನಾವಣೆಗೂ ಸಂಬಂಧವಿಲ್ಲ. ಈ ಹಿಂದೆಯೂ ಇಂತಹ ಪರಿಸ್ಥಿತಿಯಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Edited By

Shruthi G

Reported By

Madhu shree

Comments